ಉಡುಪಿ : 35 ವರ್ಷಗಳ ಹಿಂದೆ ಸರ್ಕಾರದಿಂದ ನಿವೇಶನ ಮಂಜೂರಾಗಿದ್ದರೂ, ಅರಣ್ಯ ಇಲಾಖೆಯ ಅಡ್ಡಿಯಿಂದಾಗಿ ಮನೆ ಕಟ್ಟಲಾಗದೆ ದಿಕ್ಕೆಟ್ಟು ಹೋಗಿದ್ದ ವಿಧವೆ ಹಿಂದೂ ಮಹಿಳೆಯೊಬ್ಬರ ಪರವಾಗಿ ನೆರೆಮನೆಯ ಮುಸ್ಲಿಂ ಮಹಿಳೆಯರು ಧ್ವನಿಯೆತ್ತಿದ ಅಪರೂಪದ ಘಟನೆ ಉಡುಪಿಯಲ್ಲಿ ನಡೆದಿದೆ.

ಜಿಲ್ಲೆಗೆ ಬಂದಿದ್ದ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರನ್ನು ಭೇಟಿಯಾಗಿ ಮುಸ್ಲಿಂ ಮಹಿಳೆಯರು ನೆರವು ಯಾಚಿಸಿದ್ದು, ಹಿಂದು-ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾಗಿದ್ದಾರೆ.
ವಿಧವೆಯಾಗಿರುವ ಗಿರಿಜಾ ಶೆಟ್ಟಿಗಾರ್ ಹಲವು ವರ್ಷಗಳಿಂದ ಸ್ವಂತ ಸೂರಿಲ್ಲದೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಈ ಸಂಬಂಧ ಹಲವರನ್ನು ಭೇಟಿ ಮಾಡಿದರೂ ಅವರಿಗೆ ಯಾವುದೇ ಸ್ಪಂದನೆ ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಇವರ ನೋವನ್ನು ಕಂಡ ನೆರೆಮನೆಯ ಮಹಿಳೆಯರು, ಉಡುಪಿಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳರ್ ಅವರನ್ನು ಭೇಟಿ ಮಾಡಿಸಿದ್ದಾರೆ.

ಈ ವೇಳೆ ಗಿರಿಜಾ ಶೆಟ್ಟಿಗಾರ್, ನನಗೆ ಮಂಜೂರಾದ ಸ್ಥಳದಲ್ಲಿ ಮನೆ ನಿರ್ಮಿಸಲು ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕಾಗಿ ಸಚಿವರಲ್ಲಿ ಮನವಿ ಮಾಡಿದರು. ವೃದ್ಧೆಯ ಸಮಸ್ಯೆಯನ್ನು ಸಚಿವರಿಗೆ ವಿವರಿಸುವಾಗ ನೆರೆಮನೆಯ ಮುಸ್ಲಿಂ ಮಹಿಳೆಯರು ಬಾವುಕರಾದರು. ಇದನ್ನು ಗಮನಿಸಿದ ಸಚಿವರು, ಹಿಂದೂ ಮಹಿಳೆಯ ನೋವಿಗೆ ಮುಸ್ಲಿಂ ಮಹಿಳೆಯರು ಕಣ್ಣೀರು ಹಾಕುತ್ತಿದ್ದಾರೆ. ಇದು ನಮ್ಮ ಭಾರತ ದೇಶ. ಇದನ್ನು ಉಡುಪಿ ಬಿಜೆಪಿಯವರು ಅರಿತುಕೊಳ್ಳಬೇಕು ಎಂದಿದ್ದಾರೆ.
ಇದನ್ನೂ ಓದಿ : ಕ್ರೀಡೆಯಲ್ಲಿನ ಸೋಲು-ಗೆಲುವು, ಏಳು-ಬೀಳುಗಳೇ ಜೀವನದ ಯಶಸ್ಸಿಗೆ ದಾರಿ : ಟೋರ್ಪೋಡೋಸ್ ಚೇರ್ಮನ್ ಗೌತಮ್ ಶೆಟ್ಟಿ



















