ತುಮಕೂರು : ಕಾಂಗ್ರೆಸ್ನ ಹಿರಿಯ ನಾಯಕ, ಮಾಜಿ ಸಚಿವ ವೆಂಕಟರಮಣಪ್ಪ (80) ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ವೆಂಕಟರಮಣಪ್ಪ ಅವರು ಆರೋಗ್ಯ ಸಮಸ್ಯೆಯಿಂದ ಕೆಲ ದಿನಗಳಿಂದ ಬೆಂಗಳೂರಿನ ಪೊರ್ಟೀಸ್ ಆಸ್ಪತ್ರೆಗೆ ದಾಖಲಾಗಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆ ನಡೆಯುತ್ತಿತ್ತು. ಆದರೆ, ಇಂದು ಬೆಳಗ್ಗೆ ಅವರಿಗೆ ಹೃದಯಾಘಾತ ಸಂಭವಿಸಿ ದೈವಾಧೀನರಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಪಾವಗಡದ ರಾಜಕೀಯದಲ್ಲಿ ವೆಂಕಟರಮಣಪ್ಪ ಪ್ರಮುಖ ಮುಖವಾಗಿದ್ದರು. ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಎರಡು ಬಾರಿ ಕರ್ನಾಟಕ ಸಚಿವ ಸಂಪುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಜನರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳುವ, ಗ್ರಾಮೀಣ ಭಾಗದ ಅಭಿವೃದ್ದಿಗೆ ಒತ್ತು ನೀಡುವ ನಾಯಕನಾಗಿ ಅವರು ಹೆಸರಾಗಿದ್ದರು.
ತಮ್ಮ ರಾಜಕೀಯ ಬದುಕಿನ ಅವಧಿಯಲ್ಲಿ ಅವರು ಪಾವಗಡ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಸ್ತೆ, ನೀರು, ವಿದ್ಯುತ್, ಶಿಕ್ಷಣ ಮುಂತಾದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಶ್ರಮಿಸಿದ್ದರು. ಜನರ ನಡುವೆ ಸದಾ ಬೆರೆತು, ಸರಳ ಜೀವನ ಶೈಲಿಯನ್ನು ಅನುಸರಿಸುತ್ತಿದ್ದ ವೆಂಕಟರಮಣಪ್ಪ ಅವರನ್ನು ಸಾಮಾನ್ಯ ಮತದಾರರು ತಮ್ಮ ಮನೆಯವರಂತೆ ಕಾಣುತ್ತಿದ್ದರು.
ಇದನ್ನೂ ಓದಿ : ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್



















