ಬೆಳಗಾವಿ : ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಯಲ್ಲಿ ನೀರಿನ ಒಳಹರಿವು ಕ್ಷಣಕ್ಷಣಕ್ಕೂ ಹೆಚ್ಚುತ್ತಿದೆ.
ಕಳೆದ 24 ಗಂಟೆಗಳಲ್ಲಿ ಸುಮಾರು 24 ಸಾವಿರ ಕ್ಯೂಸೆಕ್ ನೀರಿನ ಹರಿವು ಹೆಚ್ಚಳವಾಗಿದ್ದು, ಸದ್ಯ ಕಲ್ಲೋಳ ಬ್ಯಾರೇಜ್ಗೆ ಒಟ್ಟು 77 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ರಾಜಾಪುರ ಬ್ಯಾರೇಜ್ನಿಂದ ಸುಮಾರು 60 ಸಾವಿರ ಕ್ಯೂಸೆಕ್ ಹಾಗೂ ದೂದಗಂಗಾ ನದಿಯಿಂದ 18 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ನಿನ್ನೆ ಇದೇ ಸಮಯದಲ್ಲಿ 54 ಸಾವಿರ ಕ್ಯೂಸೆಕ್ ನೀರು ಹರಿಯುತ್ತಿದ್ದರೆ, ಇಂದು ಹರಿವಿನಲ್ಲಿ ಗಣನೀಯ ಏರಿಕೆ ದಾಖಲಾಗಿದೆ.
ನೀರಿನ ಮಟ್ಟ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಪಾತ್ರದ ಗ್ರಾಮಗಳಲ್ಲಿ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದು, ನದಿ ತೀರದ ಜನರು ಅನಗತ್ಯವಾಗಿ ನದಿಯತ್ತ ತೆರಳದಂತೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಆಂಬ್ಯುಲೆನ್ಸ್ಗೂ ದಾರಿ ಬಿಡದೆ ವ್ಹೀಲಿಂಗ್ ಮಾಡ್ತಾ ಪುಂಡರ ಹುಚ್ಚಾಟ!



















