ಬೆಂಗಳೂರು : ನೀವು ಇತ್ತೀಚೆಗಷ್ಟೇ ಎಸ್ಸೆಸ್ಸೆಲ್ಸಿ ಮುಗಿಸಿ ಪಿಯುಸಿಗೆ ಪ್ರವೇಶಾತಿ ಪಡೆದಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ದೊರೆತಿದೆ. ಡಾ.ರಾಜೇಂದ್ರ ಪ್ರಸಾದ್ ಸ್ಕಾಲರ್ಶಿಪ್ ಪ್ರೋಗ್ರಾಂ (Dr. Rajendra Prasad Scholarship Program 2026-27) ಅನ್ವಯ ಎಸ್ಸೆಸ್ಸೆಲ್ಸಿ ಪಾಸಾದವರಿಗೆ 30 ಸಾವಿರ ರೂಪಾಯಿ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸುವ ಮೂಲಕ ವಿದ್ಯಾರ್ಥಿವೇತನ ಪಡೆಯಬಹುದು. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.
ಅರ್ಹತೆಗಳು ಏನು?
• 2025-26ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮುಗಿಸಿರಬೇಕು
• ಸರ್ಕಾರಿ ಶಾಲೆಯಲ್ಲಿ ಓದಿದವರು ಮಾತ್ರ ವಿದ್ಯಾರ್ಥಿವೇತನಕ್ಕೆ ಅರ್ಹರು
• ಎಸ್ಸೆಸ್ಸೆಲ್ಸಿಯಲ್ಲಿ ಶೇ.65ರಷ್ಟು ಮಾರ್ಕ್ಸ್ ಪಡೆದಿರಬೇಕು
• ವಿದ್ಯಾರ್ಥಿಯ ಕುಟುಂಬದ ಆದಾಯ ವಾರ್ಷಿಕ 8 ಲಕ್ಷ ರೂ.ಗಿಂತ ಕಡಿಮೆ ಇರಬೇಕು
ಅರ್ಜಿ ಸಲ್ಲಿಸುವುದು ಹೇಗೆ?
• ಮೊದಲಿಗೆ https://www.buddy4study.com/page/dr-rajendra-prasad-scholarship-program ವೆಬ್ ಸೈಟ್ ಗೆ ಭೇಟಿ ನೀಡಬೇಕು.
• ನೋಂದಣಿ ಮಾಡಿಕೊಂಡು, Dr. Rajendra Prasad Scholarship Program 2026-27 ಆಪ್ಶನ್ ಮೇಲೆ ಕ್ಲಿಕ್ ಮಾಡಬೇಕು
• ಸ್ಟಾರ್ಟ್ ಅಪ್ಲಿಕೇಶನ್ ಮೇಲೆ ಕ್ಲಿಕ್ ಮಾಡಬೇಕು
• ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
• ಸಬ್ಮಿಟ್ ಆಯ್ಕೆ ಮೇಲೆ ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು
ಯಾವ ದಾಖಲೆ ಬೇಕು?
ಅರ್ಜಿ ಸಲ್ಲಿಸಲು ಬಯಸುವವರು ಕೆಲ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಇತ್ತೀಚಿನ ಪಾಸ್ ಪೋರ್ಟ್ ಸೈಜ್ ಫೋಟೋ, 10ನೇ ತರಗತಿ ಮಾರ್ಕ್ಸ್ ಕಾರ್ಡ್, ಪಿಯುಸಿ ಕೋರ್ಸಿಗೆ ಪ್ರವೇಶಾತಿ ಪಡೆದ ದಾಖಲೆ, ಕಟ್ಟಿದ ಫೀಸ್ ರಶೀದಿ, ಕುಟುಂಬದ ವಾರ್ಷಿಕ ಆದಾಯ ಪ್ರಮಾಣಪತ್ರ ಹಾಗೂ ಬ್ಯಾಂಕ್ ಖಾತೆಯ ವಿವರಗಳನ್ನು ಸಲ್ಲಿಸಬೇಕು.
ಇದನ್ನೂ ಓದಿ : ವಿಶ್ವೇಶ್ವರಯ್ಯ ಜಲ ನಿಗಮದಲ್ಲಿ 11 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ



















