ವಿಜಯನಗರ : ಹೊಸಪೇಟೆ ತಾಲೂಕು ಕಚೇರಿ ಆವರಣದಲ್ಲಿ ನಿರ್ಮಾಣಗೊಂಡಿದ್ದ ಸುಸಜ್ಜಿತ ಸಾರ್ವಜನಿಕ ಶೌಚಾಲಯ ಉದ್ಘಾಟನೆಯಾಗದೆ ಪಾಳು ಬಿದ್ದಿದ್ದ ಸಮಸ್ಯೆಯನ್ನು ಕರ್ನಾಟಕ ನ್ಯೂಸ್ ಬೀಟ್ ವರದಿ ಬೆಳಕಿಗೆ ತಂದ ಬೆನ್ನಲ್ಲೇ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.
ವಾರದ ಹಿಂದೆ ಪ್ರಸಾರವಾದ ವರದಿಯ ಬಳಿಕ ಶೌಚಾಲಯವನ್ನು ಸಾರ್ವಜನಿಕರ ಬಳಕೆಗೆ ತೆರೆಯಲಾಗಿದ್ದು, ಕಚೇರಿಗೆ ಆಗಮಿಸುವ ಜನರಿಗೆ ಕೊನೆಗೂ ಬಹಳ ಸಹಕಾರಿಯಾಗಿದೆ.
ಹೊಸಪೇಟೆ ತಾಲೂಕು ಕಚೇರಿ ಪಕ್ಕದಲ್ಲೇ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಶೌಚಾಲಯ ನಿರ್ಮಿಸಲಾಗಿದ್ದರೂ ಉದ್ಘಾಟನೆಯಾಗದೆ ಬಾಗಿಲು ಮುಚ್ಚಿಯೇ ಇತ್ತು. ಇದರಿಂದ ಸಾರ್ವಜನಿಕರು ಶೌಚಾಲಯದ ಪಕ್ಕದಲ್ಲೇ ಮೂತ್ರ ವಿಸರ್ಜನೆ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಚೇರಿಗೆ ವಿವಿಧ ಕೆಲಸಗಳಿಗೆ ಆಗಮಿಸುತ್ತಿದ್ದ ಜನರು ಮೂಲಭೂತ ಸೌಲಭ್ಯ ಇಲ್ಲದೆ ತೀವ್ರ ಪರದಾಡುತ್ತಿದ್ದರು.
ಈ ಸಮಸ್ಯೆಯನ್ನು ಕರ್ನಾಟಕ ನ್ಯೂಸ್ ಬೀಟ್ ಪ್ರಮುಖವಾಗಿ ವರದಿ ಮಾಡಿತ್ತು. ವರದಿ ಪ್ರಸಾರವಾದ ಬಳಿಕ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಶೌಚಾಲಯವನ್ನು ಉದ್ಘಾಟಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಿದ್ದಾರೆ. ಸಮಸ್ಯೆ ಪರಿಹಾರಗೊಂಡಿರುವುದಕ್ಕೆ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದು, ಜನರ ಸಮಸ್ಯೆಯನ್ನು ಎತ್ತಿಹಿಡಿದ ಕರ್ನಾಟಕ ನ್ಯೂಸ್ ಬೀಟ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿರುದ್ದ ಸಿಡಿದೆದ್ದ ರಾಷ್ಟ್ರೀಯ ಅಂಬೇಡ್ಕರ್ ಸೇನೆ ; ಆ.3ರಂದು ಬೃಹತ್ ಪ್ರತಿಭಟನೆಗೆ ಕರೆ!



















