ಚಿತ್ರದುರ್ಗ: ನಗರದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಗುಂಪು ಘರ್ಷಣೆ ಸಂಭವಿಸಿದೆ ಎನ್ನಲಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ತುಮಕೂರು ಜಿಲ್ಲೆಯ ಪಾವಗಡ ಬಿಜೆಪಿ ಕಾರ್ಯಕರ್ತ ಚೈತನ್ಯ ಮೇಲೆ ಪಾವಗಡ ಬಿಜೆಪಿ ಯುವ ಮೋರ್ಚಾ ಮಾಜಿ ಅಧ್ಯಕ್ಷ ಮಧು ಎಂಬುವವರಿಂದ ಹಲ್ಲೆ ನಡೆದಿದೆ.
ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ತೆರಳಿದ ಬೆನ್ನಲ್ಲೇ ಮಾರಾಮಾರಿ ನಡೆದಿದೆ ಎನ್ನಲಾಗಿದೆ. ರಾಜ್ಯದೆಲ್ಲೆಡೆ ಬಿಜೆಪಿ-ಜೆಡಿಎಸ್ ದೋಸ್ತಿ ಪಕ್ಷಗಳು ಸಾಕಷ್ಟು ಗೊಂದಲದ ನಡುವೆಯೂ ಭರ್ಜರಿ ಪ್ರಚಾರದಲ್ಲಿ ತೊಡಗಿವೆ. ಆದರೆ, ತುರುವೇಕೆರೆಯಲ್ಲಿ ಎರಡೂ ಪಕ್ಷಗಳ ಗೊಂದಲ ದೊಡ್ಡ ತಾರಕಕ್ಕೆ ಏರಿಕೆಯಾಗಿತ್ತು. ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪರ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಜೆಡಿಎಸ್-ಬಿಜೆಪಿ ಕಾರ್ಯಕರ್ತರು ವಾಗ್ವಾದ ನಡೆಸಿದ್ದರು.
ತುರುವೇಕೆರೆಯ ರಾಜಕೀಯ ಬದ್ದ ವೈರಿಗಳಾದ ಎಂಟಿ ಕೃಷ್ಣಪ್ಪ, ಮಸಾಲೆ ಜಯರಾಂ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಒಗ್ಗಟ್ಟಿನ ಮಂತ್ರ ಜಪಿಸಿದ್ದು, ಅಲ್ಲಿದ್ದವರಿಗೆ ವಿಶೇಷ ಅನಿಸಿದ್ದರೆ, ಕಾರ್ಯಕರ್ತರು ಮಾತ್ರ ವಾಗ್ವಾದ ನಡೆಸಿದ್ದಾರೆ.