ನೆಲಮಂಗಲ: ಲಾರಿ (collision) ಹಾಗೂ ಟೆಂಪೊ ಮಧ್ಯೆ ಡಿಕ್ಕಿಯಾದ ಹಿನ್ನೆಲೆಯಲ್ಲಿ ಮೂವರು ದುರ್ಮರಣ (death) ಹೊಂದಿರುವ ಘಟನೆ ನಡೆದಿದೆ.
ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಹತ್ತಿರದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಘಟನೆಯಲ್ಲಿ ಯಾದಗಿರಿ ಮೂಲದ ಕಟ್ಟಡ ಕಾರ್ಮಿಕರಾದ ನರಸಪ್ಪ(35), ಹುಸೇನಪ್ಪ(34), ಪಾದಾಚಾರಿ ತುಮಕೂರು ತಾಲೂಕಿನ ಸೀತಕಲ್ಲು ನಿವಾಸಿ ಶಿವಗಂಗಪ್ಪ(55) ಸಾವನ್ನಪ್ಪಿದ್ದಾರೆ.
ಟೆಂಪೊ ಹಿಂದೆ ಕಾಂಕ್ರೀಟ್ ಮಿಕ್ಸರ್ ಮಾಡುವ ಟ್ರಾಲಿ ಕಟ್ಟಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ನಂತರ ಲಾರಿಯು ಪಾದಚಾರಿಗೂ ಡಿಕ್ಕಿ ಹೊಡೆದಿದೆ. ಹೀಗಾಗಿ ಪಾದಾಚಾರಿ ಕೂಡ ಸಾವನ್ನಪ್ಪಿದ್ದಾರೆ.
ಟೆಂಪೊದಲ್ಲಿ ತೆರಳುತ್ತಿದ್ದ ಯಾದಗಿರಿ ಮೂಲದ ಲಕ್ಷ್ಮೀ, ಭಾನುಪ್ರಿಯಾ, ಅನಂತಪ್ಪ, ನಾಗರಾಜು, ಮೂವರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಬಂಗಾರಪ್ಪ ಸ್ಥಿತಿ ಗಂಭೀರವಾಗಿದ್ದು, ಸಾಬಣ್ಣ, ಕಟ್ಟಪ್ಪಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೂವರು ಗಾಯಾಳುಗಳನ್ನು ನೆಲಮಂಗಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನೆಲಮಂಗಲ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.