ಮೈಸೂರು: ಮುಡಾ ಹಗರಣದ ವಿಚಾರಕ್ಕೆ ಸಂಬಂಧಿಸಿದಂತೆ ರಿಟ್ ಅರ್ಜಿಯಲ್ಲಿ ಸಿಎಂ ನ್ಯಾಯಾಲಯದ ಕಣ್ತಪ್ಪಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ಆರೋಪಿಸಿದ್ದಾರೆ.
ಪತ್ನಿ ಪಾರ್ವತಿ ಮುಡಾಗೆ ಪತ್ರ ಬರೆದಿರುವುದು ಸಿಎಂ ಸಿದ್ದರಾಮಯ್ಯ ಅವರಿಗೆ ಮೊದಲೇ ತಿಳಿದಿತ್ತು. ಸಿದ್ದರಾಮಯ್ಯ ಒಟ್ಟು 713 ಪುಟಗಳ ದಾಖಲೆ ಒಳಗೊಂಡ ರಿಟ್ ಅರ್ಜಿ ಹಾಕಿದ್ದಾರೆ. 531ನೇ ಪುಟವಾಗಿ ಪಾರ್ವತಿ ಬರೆದ ಅರ್ಜಿಯ ಮೊದಲ ಪುಟ ಇದೆ. ಆದರೆ, 532ನೇ ಪುಟದಲ್ಲಿ ಪಾರ್ವತಿ ಅವರು ಬರೆದ ಪತ್ರದ ಎರಡನೇ ಪುಟ ಇಲ್ಲ ಆರೋಪಿಸಿದ್ದಾರೆ.
ಎರಡನೇ ಪುಟಕ್ಕೆ ವೈಟ್ನರ್ ಹಾಕಿ ಸಾಲೊಂದನ್ನು ಅಳಿಸಲಾಗಿದೆ. 532ನೇ ಪುಟದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ನಡಾವಳಿ ಪತ್ರ ಇದೆ. ವೈಟ್ನರ್ ಹಾಕಿ ಅಳಿಸಿರುವ ಕಾರಣಕ್ಕಾಗಿ ಎರಡನೇ ಪುಟ ಬಿಟ್ಟು ಕೇವಲ ಒಂದು ಪುಟ ಮಾತ್ರ ಕೋರ್ಟ್ ಗೆ ನೀಡಲಾಗಿದೆ. ಹೀಗಾಗಿ ಅವರು ಜನರಿಗೆ ಹಾಗೂ ನ್ಯಾಯಾಲಯದ ಎದುರು ಸತ್ಯ ಮುಚ್ಚಿಟ್ಟಿರುವುದು ಸ್ಪಷ್ಟವಾಗಿದೆ ಎಂದು ಆರೋಪಿಸಿದ್ದಾರೆ.
ರಾಜ್ಯಪಾಲರಿಗೆ ಬರೆದಿರುವ ಶೋಕಾಸ್ ನೋಟಿಸ್ನಲ್ಲೂ ಸಿಎಂ ಉಲ್ಲೇಖಿಸಿದ್ದಾರೆ. ಶೋಕಾಸ್ ನೋಟಿಸ್ ಉತ್ತರದ 30 ನೇ ಪುಟದಲ್ಲಿ ತಮ್ಮ ಪತ್ನಿ ಪತ್ರ ಬರೆದ ಮಾಹಿತಿ ನೀಡಿದ್ದಾರೆ ಆರೋಪಿಸಿದ್ದಾರೆ.
ನ್ಯಾಯಾಲಯಕ್ಕೆ ಸತ್ಯ ಮುಚ್ಚಿಟ್ಟಿರುವುದು ನ್ಯಾಯಾಂಗ ನಿಂದನೆಯಾಗುತ್ತದೆ. 29 ರಂದು ವಿಚಾರಣೆಯ ಸಂದರ್ಭದಲ್ಲಿ ಎಲ್ಲಾ ವಿಚಾರವನ್ನು ನ್ಯಾಯಾಲದ ಗಮನಕ್ಕೆ ತರುತ್ತೇವೆ. ಸಿಎಂ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲು ಮಾಡುವಂತೆ ಮನವಿ ಮಾಡುತ್ತೇವೆ ಎಂದು ಕೂಡ ಹೇಳಿದ್ದಾರೆ.