ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Chitradurga Renukaswamy murder case) ಪ್ರಕರಣದಲ್ಲಿ ಅರೆಸ್ಟ್ ಆಗಿರುವ ನಟ ದರ್ಶನ್ (Actor Darshan) ರಾಜಾತಿಥ್ಯ ಪಡೆದ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದಂತೆ ಬಳ್ಳಾರಿ ಜೈಲಿಗೆ (bellary jail) ಸ್ಥಳಾಂತರವಾಗಿದ್ದಾರೆ. ಬಿಗಿ ಭದ್ರೆತೆಯೊಂದಿಗೆ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ದರ್ಶನ್ ನನ್ನು ಕರೆತರಲಾಗಿದೆ.
ಪೊಲೀಸರು ದರ್ಶನ್ ಇದ್ದ ವಾಹನಕ್ಕೆ ಸಂಪೂರ್ಣ ಬಟ್ಟೆ ಕಟ್ಟಿ ಯಾರಿಗೂ ಕಾಣಿಸದಂತೆ ಕರೆ ತಂದಿದ್ದಾರೆ. ಬಳ್ಳಾರಿ ಜೈಲಿಗೆ ಬಂದ ನಟ ದರ್ಶನ್ ರಿಗೆ ಆರೋಗ್ಯ ಪರಿಶೀಲನೆ ನಡೆಸಲಾಯಿತು. ಆನಂತರ ಅವರನ್ನು ಸೆಲ್ ಗೆ ಬಿಡಲಾಯಿತು.
ಪೊಲೀಸರು ಮಾಧ್ಯಮಗಳ ಕಣ್ತಪ್ಪಿಸಿ ಹೈದರಾಬಾದ್ ರಸ್ತೆಯಲ್ಲಿ ಕರೆದುಕೊಂಡು ಹೋದರು. ಬಳ್ಳಾರಿಗೆ ದೇವನಹಳ್ಳಿ, ಚಿಕ್ಕಬಳ್ಳಾಪುರ, ಬಾಗೇಪಲ್ಲಿ ಮಾರ್ಗವಾಗಿ ಕರೆದುಕೊಂಡು ಹೋಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಸಿಕ್ಕಿರುವ ಹಿನ್ನೆಲೆಯಲ್ಲಿ ಕಲಬುರಗಿ ಜೈಲಿಗೆ ಗುರುವಾರ ಆರೋಪಿ ನಾಗರಾಜ್ ಶಿಫ್ಟ್ ಆಗಲಿದ್ದಾನೆ.
ನಟ ದರ್ಶನ ಮ್ಯಾನೇಜರ್ ಆಗಿದ್ದ ನಾಗರಾಜ್ A-11 ಆಗಿದ್ದು, ಬೆಂಗಳೂರಿನಿಂದ ಕಲಬುರಗಿ ಜೈಲಿಗೆ ಸಂಜೆ 4 ಗಂಟೆ ತಲುಪಲಿದ್ದಾರೆ. ಈಗಾಗಲೆ ಬೆಂಗಳೂರಿನಿಂದ ಕಲಬುರಗಿಗೆ ಬಿಗಿ ಭದ್ರತೆಯಲ್ಲಿ ಕರೆತರಲಾಗುತ್ತಿದೆ. ಶಿವಮೊಗ್ಗ ಜೈಲಿಗೆ A6 ಆರೋಪಿ ಜಗದೀಶ್ ಹಾಗೂ ಆ12 ಲಕ್ಷ್ಮಣ ಶಿಫ್ಟ್ ಆಗಲಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನೊಳಗೆ ಕಾಫಿ ಕಪ್ ಹಿಡಿದು ಸಿಗರೇಟು ಸೇದುತ್ತಾ ಕೈದಿಗಳ ಜತೆಗೆ ಕುಳಿತಿರುವ ನಟ ದರ್ಶನ್ ನ (Actor Darshan) ಫೋಟೊ ಹಾಗೂ ವಿಡಿಯೋ ಕಾಲ್ ನಲ್ಲಿ ಕಾಣಿಸಿಕೊಂಡಿರುವ ವಿಡಿಯೋ ವೈರಲ್ ಆಗಿದ್ದವು. ಹೀಗಾಗಿ ಇಡೀ ರಾಜ್ಯದಲ್ಲಿ ಇದು ಆಕ್ರೋಶಕ್ಕೆ ಕಾರಣವಾಗಿತ್ತು. ಸರ್ಕಾರದ ಮುಜುಗರಕ್ಕೆ ಕಾರಣವಾಗಿತ್ತು. ಹೀಗಾಗಿ ಸಿಎಂ ಸಿದದ್ರಾಮಯ್ಯ ಅವರು ಶಿಫ್ಟ್ ಮಾಡುವಂತೆ ಸೂಚಿಸಿದ್ದರು. ಇದಕ್ಕೆ ಕೋರ್ಟ್ ಕೂಡ ಒಪ್ಪಿಗೆ ಸೂಚಿಸಿತು. ಹೀಗಾಗಿ ಡಿ ಗ್ಯಾಂಗ್ ನ ಹಲವರನ್ನು ಬೇರೆ ಬೇರೆ ಜೈಲುಗಳಿಗೆ ಶಿಫ್ಟ್ ಮಾಡಲಾಗಿದೆ.
ಬಳ್ಳಾರಿ ಜೈಲಿಗೆ ದರ್ಶನ್
ಮೈಸೂರು ಜೈಲಿಗೆ ಪವನ್, ರಾಘವೇಂದ್ರ ನಂದೀಶ್
ಶಿವಮೊಗ್ಗ ಜೈಲಿಗೆ ಜಗದೀಶ್, ಲಕ್ಷ್ಮಣ್
ಧಾರವಾಡ ಜೈಲಿಗೆ ಧನರಾಜ್
ವಿಜಯಪುರ ಜೈಲಿಗೆ ವಿನಯ್
ಕಲಬುರುಗಿ ಜೈಲಿಗೆ ನಾಗರಾಜ್
ಬೆಳಗಾವಿ ಜೈಲಿಗೆ ಪ್ರದೂಶ್ ಶಿಫ್ಟ್ ಆಗುತ್ತಿದ್ದಾರೆ.
ಈಗಾಗಲೇ ಸೆರೆಮನೆ ವಾಸದ ಕಷ್ಟ ಅನುಭವಿಸಿರುವ ನಟ ದರ್ಶನ್ ಈ ಕುರಿತು ಜೈಲು ಸಿಬ್ಬಂದಿ ಜತೆ ದುಃಖ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಇದೆಲ್ಲಾ ಬೇಕಿತ್ತಾ ನಂಗೆ ಎಂದು ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.
ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ವಿಐಪಿ ಸೆಲ್ ಗಳು ಇಲ್ಲ. ಇಲ್ಲಿ ಎಲ್ಲವೂ ಸಾಮಾನ್ಯ ಸೆಲ್ ಗಳಂತೆ ಇವೆ. ಹೀಗಾಗಿ ದರ್ಶನ್ ಕೂಡ ಅಲ್ಲಿನ ಎಲ್ಲ ಕೈದಿಗಳಂತೆ ಸಾಮಾನ್ಯ ಕೈದಿಯಾಗಿ ಇರಲಿದ್ದಾರೆ. ಕೇಂದ್ರ ಕಾರಾಗೃಹದ ಹೊರ ಭದ್ರತಾ ವಿಭಾಗದ ಸೆಲ್ ನಲ್ಲಿ ನಟ ದರ್ಶನ್ ರನ್ನು ಇರಿಸಲಾಗುತ್ತಿದೆ. ಹೊರ ಭದ್ರತಾ ವಿಭಾಗದಲ್ಲಿ ಒಟ್ಟು 11 ಸೆಲ್ಗಳಿದ್ದು, ಒಂದು ಸೆಲ್ ನಲ್ಲಿ ಇಬ್ಬರು ಕೈದಿಗಳು ಇರುವ ವ್ಯವಸ್ಥೆ ಇದೆ. ಪ್ರತಿಯೊಂದು ಸೆಲ್ 10/10 ಅಡಿ ಅಗಲ ಹೊಂದಿದೆ.
ಸೆಲ್ ಮುಂಭಾಗ 20 ಅಡಿ ಅಗಲ 60 ಅಡಿ ಉದ್ದದ ಜಾಗದಲ್ಲಿ ವಾಕಿಂಗ್ ಮಾಡಬಹುದು. ಬೆಳಗ್ಗೆ ಮತ್ತು ಸಂಜೆ ವಾಕಿಂಗ್ ಮಾಡಲು 15 ನಿಮಿಷ ಅವಕಾಶವಿರುತ್ತದೆ. ಆಗ ಭದ್ರತಾ ಸಿಬ್ಬಂದಿ ಇರಲಿದ್ದಾರೆ. ಸೆಲ್ ನ ಒಳಗೆ ಬಾತ್ ರೂಂ, ಶೌಚಾಲಯದ ವ್ಯವಸ್ಥೆ ಇದ್ದು, ಸ್ನಾನ ಮಾಡಲು ತಣ್ಣೀರು ಮಾತ್ರ ಇರುತ್ತದೆ. ಎರಡು ಗೇಟ್ಗಳಿರುತ್ತವೆ. ಇಲ್ಲಿರುವ ಹನ್ನೊಂದು ಸೆಲ್ ಗಳಲ್ಲಿ ಸದ್ಯ ಶಿವಮೊಗ್ಗ, ಹಾಸನ, ಬೆಂಗಳೂರು, ಮಂಗಳೂರು ಮೂಲದ ಕೈದಿಗಳಿದ್ದಾರೆ. ಇನ್ನು ಮುಂದೆ ದರ್ಶನ್ ಕೂಡ ಇರಲಿದ್ದಾರೆ.