ಬೆಂಗಳೂರು: ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿಚಾರಣೆ ಎದುರಿಸಿದ್ದಾರೆ.
ಇಂದು ಸಂಜೆ ಲೋಕಾಯುಕ್ತ ಕಚೇರಿಗೆ ದೆಹಲಿಯಿಂದ ನೇರವಾಗಿ ಆಗಮಿಸಿದ ಕುಮಾರಸ್ವಾಮಿ ಬರೋಬ್ಬರಿ ಒಂದುವರೆ ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ಆನಂತರ ಮಾತನಾಡಿದ ಅವರು, ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಈ ಪ್ರಕರಣದಿಂದ ಯಾವುದೇ ತೊಂದರೆ ಇಲ್ಲ.
ನಾನು ಹಲವಾರು ಪ್ರಕರಣಗಳ ವಿರುದ್ಧ 2015ರಲ್ಲಿ ಮಾತನಾಡಿದ್ದಕ್ಕೆ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಸುಮ್ಮನೆ ಹಲವರು ನನ್ನ ವಿರುದ್ಧ ಆರೋಪ ಮಾಡಿ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ವಿಚಾರಣೆಗೆ ಹಾಜರಾಗಬೇಕೆಂದು ಲೋಕಾಯುಕ್ತ ಅಧಿಕಾರಿಗಳು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಬಂದಿದ್ದೇನೆ. ಆದರೆ, ನನಗೆ ಯಾವುದೇ ಟೆನ್ಶನ್ ಇಲ್ಲ ಎಂದು ಹೇಳಿದ್ದಾರೆ.