ಗದಗ: ಕಾರೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ (Gadag) ಹೊರವಲಯದಲ್ಲಿ ನಡೆದಿದೆ. ಈರಣ್ಣ ಜಾಲಿಹಾಳ ಎಂಬುವವರಿಗೆ ಸೇರಿದ ಕಾರು ಹೊತ್ತಿ ಉರಿದಿದೆ. ಇಂಜಿನ್ ಸಮಸ್ಯೆಯಿಂದ ಬೆಂಕಿ ಕಾಣಿಸಿಕೊಂಡಿತ್ತು. ಈರಣ್ಣ ಹಾಗೂ ಅವರ ಕುಟುಂಬಸ್ಥರು ಕಾರಿನಲ್ಲಿ ಗದಗನಿಂದ ಹನುಮಸಾಗರಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಮೊದಲು ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರಿನಲ್ಲಿದ್ದವರು ಕೆಳಗೆ ಇಳಿದಿದ್ದಾರೆ. ಹೀಗಾಗಿ ಅದೃಷ್ಟವಶಾತ್ ಪ್ರಾಣ ಹಾನಿ ತಪ್ಪಿದಂತಾಗಿದೆ. ಪರಿಣಾಮ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.