ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಸಂಚಾರ ನಡೆಸಿದ್ದು, ರಾತ್ರಿ ವೇಳೆ ಸಾರಿಗೆ ಬಸ್ ಗೆ ಅಡ್ಡ ನಿಂತು ರಂಪಾಟ ಮಾಡಿದೆ.
ಅರ್ಧ ಗಂಟೆಗಳ ಕಾಲ ರಸ್ತೆ ಮಧ್ಯೆ ನಿಂತು, ಆತಂಕ ಸೃಷ್ಟಿಯಾಗುವಂತೆ ಮಾಡಿದೆ. ದಕ್ಷಿಣ ಕನ್ನಡ – ಚಿಕ್ಕಮಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಚಾರ್ಮಾಡಿ ಘಾಟಿಯಲ್ಲಿ ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ವಾಹನಗಳು ಸಂಚಾರ ಮಾಡುತ್ತವೆ. ಕಾಡಾನೆಗಳ ದಾಳಿಯಿಂದಾಗಿ ಸವಾರರು ಆತಂಕ ವ್ಯಕ್ತಪಡಿಸುವಂತಾಗಿದೆ. ಹೀಗಾಗಿ ಸಲಗಗಳನ್ನು ಸೆರೆ ಹಿಡಿಯುವಂತೆ ಹಾಗೂ ಕಾಡಿಗೆ ಅಟ್ಟುವಂತೆ ವಾಹನ ಸವಾರರು ಒತ್ತಾಯಿಸಿದ್ದಾರೆ.