ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲೂ ಕಾಡಾನೆ ಹಾವಳಿ ಹೆಚ್ಚಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಕಾಡಾನೆವೊಂದು ಪ್ರತ್ಯಕ್ಷವಾಗಿದ್ದು, ರಸ್ತೆಯಲ್ಲಿ ಹೋಗುವ ವಾಹನಗಳನ್ನು ತಡೆದು ನಿಲ್ಲಿಸಿದೆ.
ಹೌದು.. ಉತ್ತರ ಕನ್ನಡ ಜಿಲ್ಲೆಯ ಅಂಬಿಕಾನಗರ–ಬೊಮ್ಮನಹಳ್ಳಿ ಮಾರ್ಗದಲ್ಲಿ ಒಂಟಿ ಸಲಗ ರಸ್ತೆಯಲ್ಲಿ ನಿಂತು ಸಾರಿಗೆ ಬಸ್ಗಳನ್ನು ಅಡ್ಡಹಾಕಿ ತಡೆದು ನಿಲ್ಲಿಸಿದೆ. ಇದರಿಂದ ಬಸ್ನಲ್ಲಿದ್ದ ಪ್ರಯಾಣಿಕರು ಭಯಭೀತರಾಗಿದ್ದಾರೆ.
ಬಳಿಕ ಬಸ್ ಚಾಲಕ ಮೇಲಿಂದ ಮೇಲೆ ಹಾರ್ನ್ ಮಾಡಿದ್ದರಿಮದ ಕಾಡಾನೆ ರಸ್ತೆ ಬಿಟ್ಟು ಸೈಡಿಗೆ ತೆರಳಿದ್ದು, ಬಳಿಕ ಬಸ್ಗಳು ಅಲ್ಲಿಂದ ತೆರಳಿವೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ.
ಇದನ್ನೂ ಓದಿ : ಜಮ್ಮು-ಕಾಶ್ಮೀರದ ಬಜೆಟ್ ನಿಮ್ಮ IMF ಪ್ಯಾಕೇಜ್ಗಿಂತ ಹೆಚ್ಚಿದೆ | ವಿಶ್ವಸಂಸ್ಥೆಯಲ್ಲಿ ಪಾಕ್ ಚಳಿಬಿಡಿಸಿದ ಭಾರತ



















