ಬೆಂಗಳೂರು: ವ್ಯಕ್ತಿಯೋರ್ವ ಮೂತ್ರ ವಿಸರ್ಜನೆಗೆಂದು ತೆರಳಿ, ಚರಂಡಿಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ಹೆಸರಘಟ್ಟ ರಸ್ತೆಯ ಲಕ್ಷ್ಮಿಪುರದ ನಿವಾಸಿ ಹರೀಶ್ ಗುರುವಾರ ರಾತ್ರಿ ತನ್ನ ಚಿಕ್ಕಮ್ಮನ ಮನೆಗೆ ತೆರಳಬೇಕಿತ್ತು. ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಹರೀಶ್, ತಡೆಗೋಡೆ ಇಲ್ಲದ ಜಾಗಕ್ಕೆ ಮೂರ್ತ ವಿಸರ್ಜನೆಗೆಂದು ಹೋಗಿದ್ದಾನೆ. ಈ ವೇಳೆ ಆಯತಪ್ಪಿ ಚರಂಡಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಕಳೆದ ಆರು ತಿಂಗಳ ಹಿಂದೆ ಹರೀಶ್ ಮನೆ ಬಿಟ್ಟು ಗಾರೆ ಕೆಲಸ ಮಾಡುತ್ತಿದ್ದ. ಕುಡಿತದ ಚಟ ಬಿಡಿಸಲು ರಿಯಾಬ್ ಸೆಂಟರ್ ಗೆ ಸೇರಿಸಲಾಗಿತ್ತು. ಅಲ್ಲಿಂದ ಬಂದು ಸ್ವಲ್ಪ ದಿನ ಮನೆಯಲ್ಲಿದ್ದ. ವಾರದ ಹಿಂದೆ ಗಾರೆ ಮೇಸ್ತ್ರಿ ಕೆಲಸಕ್ಕೆ ಸೇರಿದ್ದ, ಹರೀಶ್ ಮೃತಪಡುವುದಕ್ಕೂ ಮೊದಲು ತೇಲಾಡಿಕೊಂಡು ಹೋಗುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ..ಆ ದೃಶ್ಯದಲ್ಲಿ ಕಾಣುವ ಹಾಗೆ ಓರ್ವ ವ್ಯಕ್ತಿ ಈತ ಬೀಳುವುದನ್ನ ಕಂಡರೂ ಕಾಣದಂತೆ ಹೋಗಿದ್ದು, ಬೇಸರ ವ್ಯಕ್ತವಾಗುವಂತಾಗಿದೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ಕುರಿತು ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.