ಬೀದರ್ : ಮೊಬೈಲ್ ಹೆಚ್ಚು ನೋಡಬೇಡ ಅಂತಾ ಬುದ್ಧಿ ಹೇಳಿದ್ದಕ್ಕೆ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಡಿಗ್ಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸೋನಿ ಸಂತೋಷ ಬನವಾಸೆ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎನ್ನಲಾಗಿದೆ. ವಿದ್ಯಾರ್ಥಿನಿಯು ಇತ್ತೀಚೆಗೆ ಹೆಚ್ಚು ಮೊಬೈಲ್ ನೋಡುತ್ತಿದ್ದರು. ಹೀಗಾಗಿ ಮೊಬೈಲ್ ಬಳಸಬೇಡ ಅಂತಾ ಬುದ್ಧಿ ಹೇಳಲಾಗಿದೆ. ಇದರಿಂದ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.
ಸೋನಿ 9ನೇ ತರಗತಿಯಲ್ಲಿ ಓದುತ್ತಿದ್ದಳು ಎನ್ನಲಾಗಿದೆ. ಸ್ಥಳಕ್ಕೆ ಕಮಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.