ಕೋಲಾರ : ಜಿಲ್ಲೆಯ ಬಂಗಾರಪೇಟೆ ನಗರದಲ್ಲಿ ಹಾಡಹಗಲೇ ನಡೆದ ಗೂಂಡಾಗಿರಿ ಜನರನ್ನು ಬೆಚ್ಚಿಬೀಳಿಸಿದೆ. ನಗರದಲ್ಲೇ ಜನಸಂಚಾರ ಇರುವ ಪ್ರದೇಶದಲ್ಲಿ ಪುಡಿರೌಡಿಗಳ ಅಟ್ಟಹಾಸ ಹೆಚ್ಚುತ್ತಿರುವುದಕ್ಕೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.
ನಗರದ ಅಯ್ಯಪ್ಪ ಸ್ವಾಮಿ ವೃತ್ತದ ಸ್ಪೆಕ್ಟ್ರಾ ಹಾರ್ಡ್ ವೇರ್ ಮಳಿಗೆಗೆ ಏಕಾಏಕಿ ನುಗ್ಗಿದ ಗುಂಪು, ಶ್ರೀನಿವಾಸ್ ಎಂಬ ಯುವಕನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದೆ ಕುಡಿದ ಸ್ಥಿತಿಯಲ್ಲಿ ರಸ್ತೆ ಮಧ್ಯೆ ನಿಂತಿದ್ದ ರಾಕೇಶ್ ಎಂಬಾತನನ್ನು ಶ್ರೀನಿವಾಸ್ ಗುರಾಯಿಸಿ ನೋಡಿದ್ದೇ ಜಗಳಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ.
ಕಿಡಿಗೇಡಿಗಳು ಮಳಿಗೆಯೊಳಗೆ ನುಗ್ಗಿ, ಸಿಬ್ಬಂದಿ ಯುವಕನನ್ನು ಹೊರಗೆ ಎಳೆದು ಹಲ್ಲೆ ನಡೆಸಿದ ದೃಶ್ಯಗಳು ಸಿಸಿ ಟಿವಿಯಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ಈ ಘಟನೆ ಸ್ಥಳೀಯರಲ್ಲೂ ಭಯದ ವಾತಾವರಣ ಸೃಷ್ಟಿಸಿದೆ.
ಇಂತಹ ಗೂಂಡಾ ವರ್ತನೆಗೆ ತಕ್ಷಣ ಬ್ರೇಕ್ ಹಾಕಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಪ್ರಕರಣ ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿಬರುತ್ತಿದೆ.
ಇದನ್ನೂ ಓದಿ : ‘ಇದು ಅಭಿಮಾನವಲ್ಲ, ಗುಲಾಮಗಿರಿ’ ; ಧೋನಿ, CSK ಮ್ಯಾನೇಜ್ಮೆಂಟ್ ವಿರುದ್ಧ ಸಂಜಯ್ ಮಂಜ್ರೇಕರ್ ಗರಂ!


















