ಬೆಂಗಳೂರು: ಹೆಂಡತಿ ಹಾಗೂ ಆಕೆಯ ತಂದೆಯ ಕಾಟಕ್ಕೆ ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೈಯ್ಯಪ್ಪನಹಳ್ಳಿಯಲ್ಲಿ ರೈಲಿಗೆ ತಲೆಕೊಟ್ಟು ತಿಪ್ಪಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹಂದಿಗನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ತಿಪ್ಪಣ್ಣ ಹುಳಿಮಾವು ಪೋಲಿಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
ನಾಗನಾತಪುರದ ಕೃಷ್ಣಪ್ಪಲೇಔಟ್ನಲ್ಲಿ ವಾಸವಿದ್ದರು. ಹೆಂಡತಿ, ಮಾವ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪತ್ನಿ, ಮಾವ ವಿರುದ್ಧ ಡೆತ್ನೋಟ್ ಬರೆದಿಟ್ಟು ತಿಪ್ಪಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕರೆ ಮಾಡಿದಾಗ, ‘ನೀನು ಸತ್ತು ಹೋಗು, ನನ್ನ ಮಗಳು ಚೆನ್ನಾಗಿ ಇರುತ್ತಾಳೆ’ ಎಂದು ಹೇಳಿ ಅವಾಚ್ಯ ಪದಗಳಿಂದ ಮಾವ ನಿಂದಿಸಿದ್ದಾರೆ ಎಂದು ಡೆತ್ನೋಟ್ನಲ್ಲಿ ತಿಪ್ಪಣ್ಣ ಉಲ್ಲೇಖಿಸಿದ್ದಾರೆ.
ಕುರಿತು ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ತಿಪ್ಪಣ್ಣ ತಂದೆ ದೂರು ನೀಡಿದ್ದಾರೆ. ತನ್ನ ಮಗನಿಗೆ ನ್ಯಾಯ ಕೊಡಿಸುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.