ತುಮಕೂರು: ಸಾಮಾಜಿಕ ಜಾಲತಾಣದಲ್ಲಿ (Social Media) ಕೋಮು ಸೌಹಾರ್ದ ಕೆರಳಿಸುವಂತಹ ಪೋಸ್ಟ್ ಹಾಕಿದ ಕಾರಣಕ್ಕೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ (Shakunthala Nataraj) ಬಂಧಿಸಲಾಗಿದೆ.
ಶಕುಂತಲಾ ನಟರಾಜ್ ವಿರುದ್ಧ ನವೆಂಬರ್ 24ರಂದು ಎಫ್ ಐಆರ್ ದಾಖಲಾಗಿತ್ತು. ಹೀಗಾಗಿ ಪೊಲೀಸರು ಶಕುಂತಲಾ ಅವರನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಕೋಮು ವೈಷಮ್ಯದ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಉಮಾಶಂಕರ್ ದೂರು ನೀಡಿದ್ದರು. ಹೀಗಾಗಿ ಎಫ್ ಐಆರ್ ದಾಖಲಿಸಲಾಗಿತ್ತು.
ಯೋಗಿಜಿ ರಾಜ್ಯದಲ್ಲಿ ಕಲ್ಲು ತೂರಾಟ ನಡೆಸಿದ್ದರಿಂದ ಅಲ್ಲಾ ಸಹಾಯಕ್ಕೆ ಬರಲಿಲ್ಲಾ. ಆದ್ದರಿಂದ ಜೀವ ಹೋಗಿದೆ ಅಷ್ಟೇ. ಮೇಲೆ ಹೋದಮೇಲೆ 72 ಜನ ಸುಂದರಿಯರು ಸಿಗುತ್ತಾರೆ ಎಂದು ಶಕುಂತಲಾ ಬರೆದುಕೊಂಡಿದ್ದರು. ಹೀಗಾಗಿ ಅವರ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.