ಧಾರವಾಡ: ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಇತ್ತೀಚೆಗೆ ಮಂಗಗಳು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಈಗ ಮತ್ತೆ 6 ಮಂಗಗಳು ಸಾವನ್ನಪ್ಪಿದ್ದು, ಜನರು ದೇವಸ್ಥಾನ ನಿರ್ಮಿಸಿದ್ದಾರೆ.
ಗ್ರಾಮದಲ್ಲಿ ಅನಾರೋಗ್ಯದಿಂದಾಗಿ ಮಂಗಗಳು ಸಾವನ್ನಪ್ಪುತ್ತಿರುವ ಶಂಕೆ ವ್ಯಕ್ತವಾಗುತ್ತಿದೆ. ಹೀಗಾಗಿ ಮಂಗಗಳ ಸಾವಿನ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಈ ಮೊದಲು ಎರಡು ಮಂಗಗಳ ಸಾವಾಗಿತ್ತು. ಅಲ್ಲಿನ ಗ್ರಾಮಸ್ಥರು ವೈದ್ಯರ ನೆರವಿನಿಂದ ಉಳಿದ ಮಂಗಗಳನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಪಶು ವೈದ್ಯರಿಂದ ಮಂಗಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ 6 ಮಂಗಗಳು ಸಾವನ್ನಪ್ಪಿವೆ. ಮೃತ ಮಂಗಗಳನ್ನು ಅಲ್ಲಿನ ಗ್ರಾಮಸ್ಥರು ಒಂದೇ ಕಡೆ ಅಂತ್ಯಕ್ರಿಯೆ ಮಾಡಿ, ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಿದ್ದಾರೆ.
ಜೊತೆಗೆ ಮಂಗಗಳಿಗೆ ಸಮಾಧಿ ಕಟ್ಟಿ ಪುಣ್ಯಾರಾಧನೆ ನೆರವೇರಿಸಿ ಗ್ರಾಮದಲ್ಲಿ ಅನ್ನ ಸಂತರ್ಪಣೆ ಮಾಡಿದ್ದಾರೆ. ಗ್ರಾಮಸ್ಥರು ಕೊಡುತ್ತಿದ್ದ ಹಣ್ಣು- ಹಂಪಲು ತಿನ್ನುತ್ತಿದ್ದ ಮಂಗಗಳನ್ನು ನೆನೆದು ಗ್ರಾಮಸ್ಥರು ಭಾವುಕರಾಗಿದ್ದಾರೆ. ಮಂಗಗಳ ಸರಣಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.