ಯಾದಗಿರಿ: ಪತ್ನಿಯ ಶೀಲ ಶಂಕಿಸಿ ಹೆತ್ತ ತಂದೆಯೇ ತನ್ನ ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಯಾದಗಿರಿ ತಾಲೂಕಿನ ಹತ್ತಿಕುಣಿ ಗ್ರಾಮದಲ್ಲಿ ನಡೆದಿದೆ.
ಮಲಗಿದ್ದ ಮಕ್ಕಳ ಮೇಲೆ ಕ್ರೌರ್ಯ ಮೆರೆದ ರಾಕ್ಷಸ ತಂದೆ ಶರಣಪ್ಪ. ತಾಯಿ ಬಹಿರ್ದೆಸೆಗೆ ಹೋಗಿದ್ದಾಗ ಮಕ್ಕಳನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಸಾನ್ವಿ (5), ಭರತ (3) ಮೃತ ದುರ್ದೈವಿ ಮಕ್ಕಳು. ಮತ್ತೋರ್ವ ಮಗನ ಸ್ಥಿತಿ ಗಂಭಿರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಶರಣಪ್ಪನ ಪತ್ನಿ ಕಳೆದ ಕೆಲ ದಿನಗಳಿಂದ ಗಂಡನೊಂದಿಗೆ ಹೊಂದಾಣಿಕೆಯಾಗದೇ ತವರು ಮನೆ ಸೇರಿದ್ದಳು. ಹದಿನೈದು ದಿನಗಳ ಹಿಂದಷ್ಟೇ ಪತ್ನಿಯನ್ನು ಮರಳಿ ಮನೆಗೆ ಕರೆತಂದಿದ್ದ. ನಿನ್ನೆ ಮಗಳು ಸಾನ್ವಿಯನ್ನು ಹೋಗಿ ಕರೆದುಕೊಂಡು ಬಂದಿದ್ದ.
ಬೆಳಗ್ಗೆ ಹೆಂಡತಿ ಬಹಿರ್ದೆಸೆಗೆ ಹೋಗಿದ್ದಾಗ ಮಲಗಿದ್ದ ಮಕ್ಕಳನ್ನು ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ. ಒಬ್ಬರು ಮಕ್ಕಳು ಸಾವನ್ನಪ್ಪಿವೆ, ಮತ್ತೋರ್ವ ಮಗನ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಯಾದಗಿರಿ ಡಿವೈಎಸ್ಪಿ ಸುರೇಶ್ ನಾಯಕ್, ಪಿಎಸ್ಐ ಹಣಮಂತ ಬಂಕಲಗಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಈ ಸಂಬಂಧ ಯಾದಗಿರಿ ಗ್ರಾಮೀಣ ಪೊಲೀಸ್ ಠಾಣಾಯಲ್ಲಿ ಘಟನೆ ನಡೆದಿದೆ.