ವಿಜಯಪುರ: ಈಜಲು ಹೋಗಿ ವಿದ್ಯಾರ್ಥಿಯೋರ್ವ ನೀರು ಪಾಲಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ನಗರದ (Vijayapura) ಬೇಗಂ ತಲಾಬ್ ನಲ್ಲಿ (Begum Talab) ನಲ್ಲಿ ಈ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಹವೇಲಿ ಗಲ್ಲಿಯ ನಿವಾಸಿ ಅನಿರುದ್ದ ಕಲ್ಯಾಣಕುಮಾರ ಸಾಮ್ರಾಣಿ (20) ಎಂದು ಗುರುತಿಸಲಾಗಿದೆ.
ರಜೆಯ ಹಿನ್ನೆಲೆ ಅನಿರುದ್ದ ತನ್ನ ಸಹೋದರ ಹಾಗೂ ಗೆಳೆಯರೊಂದಿಗೆ ಬೇಗಂ ತಲಾಬ್ ಗೆ ತೆರಳಿದ್ದರು. ಈ ಸಂದರ್ಭದಲ್ಲಿ ಅನಿರುದ್ದ ಈಜಲು ಕೆರೆಗೆ ಇಳಿದಿದ್ದಾನೆ. ಆನಂತರ ನೀರು ಪಾಲಾಗಿದ್ದಾನೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಮೃತನ ಶವಕ್ಕಾಗಿ ಶೋಧ ಕಾರ್ಯ ಆರಂಭಿಸಲಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.