ಧಾರವಾಡ: ರಾಜ್ಯದಲ್ಲಿ ಮತ್ತೆ ಅಪಘಾತಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಮೂವರು ರೈತರು ಅಪಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ಅಳ್ನಾವರ (Alnavara) ತಾಲೂಕಿನ ಕಡಬಗಟ್ಟಿ ಹತ್ತಿರದ ಧಾರವಾಡ-ಅಳ್ನಾವರ-ಗೋವಾ ಹೆದ್ದಾರಿಯಲ್ಲಿ ಭೀಕರ ಅಪಘಾತ ನಡೆದಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಶಿರಸಂಗಿಯ ಹನುಮಂತಪ್ಪ ಮಲ್ಲಾಡ (45), ಮಹಾಂತೇಶ್ ಚವ್ಹಾಣ್ (40), ಮಹದೇವ ಹಾಲೊಳ್ಳಿ (40) ಸಾವನ್ನಪ್ಪಿರುವ ದುರ್ದೈವಿಗಳು, ಅಲ್ಲದೇ, ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮದ ರೈತರು ವಾಹನದಲ್ಲಿ ಮೇವಿನ ಹೊಟ್ಟು ತುಂಬಿಕೊಂಡು ಗೋವಾಕ್ಕೆ ಹೊರಟಿದ್ದರು. ಈ ಸಂದರ್ಭದಲ್ಲಿ ಎದುರು ಬರುತ್ತಿದ್ದ ಟಿಟಿ ವಾಹನ ಅಳ್ನಾವರ ತಾಲೂಕಿನ ಕಡಬಗಟ್ಟಿ ಡಿಕ್ಕಿ ಹೊಡೆದಿದೆ. ಪರಿಣಾಮ ಈ ಘಟನೆ ನಡೆದಿದೆ. ಅಳ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗೋವಾದಲ್ಲಿ ಮೇವಿನ ಹೊಟ್ಟಿಗೆ ಹೆಚ್ಚಿನ ಬೇಡಿಕೆಯಿದ್ದ ಹಿನ್ನೆಲೆಯಲ್ಲಿ ರೈತರು, ಮೇವು ತೆಗೆದುಕೊಂಡು ಹೋಗುತ್ತಿದ್ದರು ಎನ್ನಲಾಗಿದೆ.