ಚಿಕ್ಕಬಳ್ಳಾಪುರ: ದೀಪಾವಳಿ ಹಬ್ಬಕ್ಕಾಗಿ ಡಿ.ಕೆ ಫ್ಯಾಮಿಲಿ ರೆಸ್ಟೋರೆಂಟ್ ಮುಂಭಾಗದಲ್ಲಿ ತೋರಣ ಕಟ್ಟಲು ಹೋದ ಯುವಕನಿಗೆ ವಿದ್ಯುತ್ ಸ್ವರ್ಶಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಚಿಕ್ಕಬಳ್ಳಾಪುರದಲ್ಲಿ ತಾಲೂಕಿನ ಹೊನ್ನೇನಹಳ್ಳಿಯ ಸಂಭವಿಸಿದೆ.
ನೇಪಾಳ ಮೂಲದ ಪದಮ್ ಸಾವನ್ನಪ್ಪಿದ್ದಾನೆ. ಇತನು ಡಿ.ಕೆ.ಫ್ಯಾಮಿಲಿ ರೆಸ್ಟೋರೆಂಟ್ನಲ್ಲಿ ಅಡುಗೆ ಕೆಲಸಗಾರನಾಗಿ ಕಾರ್ಎಯ ನಿರ್ವಹಿಸುತ್ತಿದ್ದಾನೆ ಎನ್ನಲಾಗಿದೆ.
ರೆಸ್ಟೋರೆಂಟ್ನಲ್ಲಿ ದೀಪಾವಳಿ ಹಬ್ಬವನ್ನು ಆಚರಣೆ ಮಾಡಲಾಗುತ್ತಿತ್ತು. ಹಬ್ಬಕ್ಕೆ ಪದಮ್ ರೆಸ್ಟೋರೆಂಟ್ ಮುಂಭಾಗದಲ್ಲಿ ಮಾವಿನ ತಳಿರುತೋರಣ ಕಟ್ಟಲು ಮುಂದಾಗಿದ್ದಾನೆ. ಮುಂಭಾಗದಲ್ಲಿದ್ದ ಪಾನ್ ಶಾಪ್ ಮೇಲೆ ಹತ್ತಿದ ಆತನಿಗೆ ತಲೆ ಮೇಲೆ ಹಾದು ಹೋಗಿದ್ದ ವಿದ್ಯುತ್ ಲೈನ್ ತಗುಲಿದೆ. ವಿದ್ಯುತ್ ಸ್ವರ್ಶದಿಂದ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅವಘಡದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.