ವಿಜಯನಗರ: ಜಿಲ್ಲೆಯ (Vijayanagar) ಐತಿಹಾಸಿಕ ಕೊಟ್ಟೂರು ಗುರುಬಸವೇಶ್ವರ (Kotturu Guru Basaveshwara) ಮಠದಲ್ಲಿ ಅವಘಡವೊಂದು ನಡೆದಿದೆ.
ಜಾತ್ರೆಯ(fair) ತೇರನ್ನು ಹೊರ ತೆಗೆಯುವ ಸಂದರ್ಭದಲ್ಲಿ ಅವಘಡ ಸಂಭವಿಸಿದ್ದು, ಕೂದಲೆಳೆ ಅಂತರದಲ್ಲಿ ಭಕ್ತರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗುರುಬಸವೇಶ್ವರ ತೇರನ್ನು ಹೊರತೆಗೆಯುತ್ತಿದ್ದ ಸಂದರ್ಭದಲ್ಲಿ ತೇರಿನೊಳಗಿನ ಸ್ಟೇರಿಂಗ್ ಕೈ ಕೊಟ್ಟಿದೆ. ಪರಿಣಾಮ ಭಾರೀ ಗಾತ್ರದ ತೇರು ರಭಸವಾಗಿ ಕೆಳಗೆ ಬಿದ್ದಿದೆ.
ರಥವನ್ನು(chariot) ಜೋರಾಗಿ ಎಳೆದಿದ್ದರಿಂದಾಗಿ ಸ್ಟೇರಿಂಗ್ ಕಟ್ ಆಗಿ ತೇರು ಕೆಳಗೆ ಬಿದ್ದಿದೆ. ಈ ವೇಳೆ ಸ್ಥಳದಲ್ಲಿದ್ದ ಭಕ್ತರು ಪ್ರಾಣಾಪಾಯದಿಂದ ಪಾರಾಗಿದ್ದು, ದೊಡ್ಡ ಅನಾಹುತ ತಪ್ಪಿದಂತಾಗಿದೆ. ರಥದ ಗಾಲಿಗಳ ನಿರ್ವಹಣೆ ಮಾಡುವವರ ಸಮಯ ಪ್ರಜ್ಞೆಯಿಂದ ಈ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಆದರೆ, ರಸ್ತೆ ಬದಿ ನಿಂತಿದ್ದ ಸ್ಕೂಟಿ ಹಾಗೂ ಬೈಕ್ ಗಳು ರಥದಡಿಗೆ ಸಿಲುಕಿ ಜಖಂ ಆಗಿವೆ.