ಹಾಸನ : ಜೀಪ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ LLB ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಬೇಲೂರು ತಾಲೂಕಿನ ಹಿರಿಅಸಡೆ ಗ್ರಾಮದ ಬಳಿ ನಡೆದಿದೆ. ಚಂದನ್ (22) ಮೃತ ಯುವಕ ಎಂದು ತಿಳಿದುಬಂದಿದೆ.
ಬೈಕ್ನಲ್ಲಿ ಹಿಂಬದಿ ಕುಳಿತಿದ್ದ ಭರತ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ವೇಳೆ ಕಾರ್ಮಿಕರನ್ನು ಕರೆದುಕೊಂಡು ಬರುತ್ತಿದ್ದ ಜೀಪ್ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಚಂದನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಎದುರು ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
ಇದನ್ನೂ ಓದಿ : ರಸ್ತೆ ಬದಿ ನಿಂತು ಮೊಬೈಲ್ನಲ್ಲಿ ಮಾತನಾಡುತ್ತಿದ್ದ ತಂದೆ-ಮಗನ ಮೇಲೆ ಹರಿದ ಲಾರಿ | ಇಬ್ಬರೂ ಸ್ಥಳದಲ್ಲೇ ಸಾವು



















