ರಾಯಚೂರು: ಲಿಂಗಸುಗೂರಿನ ಹಟ್ಟಿ ಚಿನ್ನದಗಣಿಯಲ್ಲಿ (Hatti Gold Mine) ಏರ್ ಬ್ಲಾಸ್ಟ್ (Air Blast) ಆದ ಪರಿಣಾಮ ಕಾರ್ಮಿಕರೊಬ್ಬರು ಸಾವನ್ನಪ್ಪಿ, ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಶರಣಬಸವ (40) ಸಾವನ್ನಪ್ಪಿರುವ ವ್ಯಕ್ತಿ. ಮತ್ತೋರ್ವ ಕಾರ್ಮಿಕ ನಿರುಪಾದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿನ್ನದ ಗಣಿಯ ಮಲ್ಲಪ್ಪ ಶಾಫ್ಟ್ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಸುಮಾರು 2,800 ಅಡಿ ಆಳದಲ್ಲಿ ಗಣಿಗಾರಿಕೆ ಮಾಡುತ್ತಿದ್ದಾಗ ಏರ್ ಬ್ಲಾಸ್ಟ್ ಆಗಿದೆ ಎನ್ನಲಾಗಿದೆ. ಗಾಯಗೊಂಡ ಕಾರ್ಮಿಕ ಚಿನ್ನದ ಗಣಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.