ಬೆಂಗಳೂರು: ಮರದ ಕೊಂಬೆ ಬಿದ್ದು ಬೆಂಗಳೂರು ನಿವಾಸಿ ಅಕ್ಷಯ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಡಿಸಿಎಫ್ ಬಿಎಲ್ ಜಿ ಸ್ವಾಮಿಯನ್ನು ಎತ್ತಂಗಡಿ ಮಾಡಿದೆ.
ಸ್ವಾಮಿ ಅವರಿಗೆ ಯಾವುದೇ ಹುದ್ದೆ ನೀಡದೆ ರಾಜ್ಯ ಸರ್ಕಾರ ಎತ್ತಂಗಡಿ ಮಾಡಿದೆ. ಬೆಂಗಳೂರು ನಗರಾಭಿವೃದ್ಧಿ ಇಲಾಖೆಗೆ ನೇಮಿಸುವ ಹಕ್ಕು ಕೊಟ್ಟು, ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸ್ವಾಮಿ ಜಾಗಕ್ಕೆ ಚಿಕ್ಕಮಗಳೂರು DCF ಸುದರ್ಶನ್ ಜಿಕೆ ನೇಮಕವಾಗಿದ್ದಾರೆ.
ಯಾವುದೇ ಹುದ್ದೆ ತೋರಿಸದೆ ಸ್ವಾಮಿ ತಲೆದಂಡವಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ದಾರಿಯಲ್ಲಿ ಹೋಗುತ್ತಿದ್ದ ವೇಳೆ ಮರ ಬಿದ್ದು ಅಕ್ಷಯ್ ಗಂಭೀರವಾಗಿ ಗಾಯಗೊಂಡಿದ್ದರು. ಆವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆಸ್ಪತ್ರೆಯ ಚಿಕಿತ್ಸಾ ವೆಚ್ಚವನ್ನು ಕೂಡ ಬಿಬಿಎಂಪಿಯೇ ಭರಿಸುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅಕ್ಷಯ್ ನಿನ್ನೆ ಅಸುನೀಗಿದ್ದಾರೆ. ಅವರ ಕುಟುಂಬಕ್ಕೆ ಬಿಬಿಎಂಪಿ 5 ಲಕ್ಷ ರೂ. ಪರಿಹಾರವನ್ನು ಕೂಡ ಘೋಷಿಸಿದೆ. ಈ ಮಧ್ಯೆ ಅಧಿಕಾರಿಯನ್ನು ಸರ್ಕಾರ ವರ್ಗಾವಣೆ ಮಾಡಿದೆ.