ಬಾಗಲಕೋಟೆ : ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಈ ಸಂಬಂಧ ದೂರು ದಾಖಲಾಗಿದೆ.
ಸ್ವಾಮೀಜಿ ತನ್ನ ವಿಡಿಯೋ ಮಾಡಿಕೊಂಡು ಬೆದರಿಕೆ ಹಾಕುತ್ತಿದ್ದಾರೆ ಎಂದು ಬೆಂಗಳೂರು ಮೂಲದ ಮಹಿಳೆ ಗಂಭೀರ ಆರೋಪ ಮಾಡಿದ್ದು, ಈ ಕುರಿತು ರಾಜ್ಯ ಮಹಿಳಾ ಆಯೋಗಕ್ಕೆ ದೂರು ದಾಖಲು ಮಾಡಿದ್ದಾರೆ. ಈ ದೂರಿನ ಬೆನ್ನಲ್ಲೇ ಎಚ್ಚೆತ್ತ ಮಹಿಳಾ ಆಯೋಗ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಬಾಗಲಕೋಟೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆದಿದೆ.

ಬಸವಜಯ ಮೃತ್ಯುಂಜಯ ಸ್ವಾಮೀಜಿಯವರು ದೈಹಿಕ, ಮಾನಸಿಕ ಹಾಗೂ ಲೈಂಗಿಕ ಶೋಷಣೆ ಮಾಡಿ, ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಿಸುವುದಾಗಿ ಬ್ಲಾಕ್ಮೇಲ್ ಮಾಡುತ್ತಾ, ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಪಡಿಸುತ್ತಿರುವ ಗಂಭೀರ ಆರೋಪವನ್ನು ಸಂತ್ರಸ್ತ ಮಹಿಳೆ ಮಾಡಿದ್ದು, ಈ ಹಿನ್ನೆಲೆ ಪ್ರಕರಣವನ್ನು ನಿಯಮಾನುಸಾರ ಪರಿಶೀಲಿಸಿ ಸಂತ್ರಸ್ತಗೆ ನ್ಯಾಯ ಹಾಗೂ ರಕ್ಷಣೆ ಒದಗಿಸಿ ಕೊಡುವಂತೆ ಸಂಬಂಧಪಟ್ಟ ಅಧಿಕಾರಿಯವರಿಗೆ ನಿರ್ದೇಶನ ನೀಡುವಂತೆ ಮಹಿಳಾ ಆಯೋಗ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಸೂಚಿಸಿದೆ. ಹಾಗೆಯೇ ತಪ್ಪಿತಸ್ಥರ ವಿರುದ್ದ ಕೂಡಲೇ ಸೂಕ್ತ ಕ್ರಮ ಕೈಗೊಂಡು ವರದಿಯನ್ನು ಆಯೋಗಕ್ಕೆ ಕಳುಹಿಸಿ ಕೊಡುವಂತೆ ಪತ್ರದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಆಸ್ಟ್ರೇಲಿಯಾ ಸ್ಟಾರ್ ಕ್ರಿಕೆಟರ್ ಡೇವಿಡ್ ವಾರ್ನರ್ ಬಂಧನ!



















