ಬೆಂಗಳೂರು: ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಜನವರಿ 26 ಮತ್ತು 27ರಂದು ರಾಜಭವನಕ್ಕೆ (Raj Bhavan) ಸಾರ್ವಜನಿಕರ ಪ್ರವೇಶವನ್ನು ಕಲ್ಪಿಸಲಾಗಿದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್ (R Prabhushankar) ಪ್ರಕಟಣೆಯ ಮೂಲಕ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಸಾರ್ವಜನಿಕರು ಮುಖ್ಯದ್ವಾರದ ಮೂಲಕ ಉಚಿತ ಪ್ರವೇಶ ಪಡೆಯಬಹುದು. ರಾಜಭವನ ಪ್ರವೇಶ ಪಡೆಯಲಿಚ್ಚಿಸುವವರು ಆಧಾರ್ ಕಾರ್ಡ್ ಅಥವಾ ಭಾವ ಚಿತ್ರವಿರುವ ಅಧಿಕೃತ ಗುರುತಿನ ಚೀಟಿ ಹಾಜರುಪಡಿಸಬೇಕು. ಸಾರ್ವಜನಿಕರು ಸಂಜೆ 6 ರಿಂದ 7:30ರ ವರೆಗೆ ಅವಕಾಶ ನೀಡಲಾಗುವುದು ಎಂದು ಹೇಳಿದ್ದಾರೆ.
ಸಾರ್ವಜನಿಕರು ಯಾವುದೇ ರೀತಿಯ ಕ್ಯಾಮೆರಾ, ಕೈ ಚೀಲ, ಚೂಪಾದ ವಸ್ತುಗಳು, ತಿಂಡಿ-ತಿನಿಸು, ಪ್ಲಾಸ್ಟಿಕ್ ವಸ್ತುಗಳು ಇನ್ನಿತರ ಯಾವುದೇ ಲಗೇಜ್ ಬ್ಯಾಗ್ ತರುವಂತಿಲ್ಲ. ಒಳಗಡೆ ವಾಹನ ನಿಲುಗಡೆಗೆ ಅವಕಾಶವಿರುವುದಿಲ್ಲ ಎಂದು ಪ್ರಕಟಣೆ ಮೂಲಕ ತಿಳಿಸಲಾಗಿದೆ.