ಹುಬ್ಬಳ್ಳಿ: ನಗರದಲ್ಲಿನ ಯುವತಿಯ ಮನೆಗೆ ನುಗ್ಗಿ ಹತ್ಯೆ ಮಾಡಿದ್ದ ಆರೋಪಿಯನ್ನು 8 ದಿನ ಸಿಐಡಿ ಕಸ್ಟಡಿಗೆ ನ್ಯಾಯಾಲಯ ನೀಡಿದೆ.
ಅಂಜಲಿ ಅಂಬಿಗೇರ(Anjali Ambigera) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿಶ್ವನನ್ನು 8 ದಿನ ಸಿಐಡಿ ವಶಕ್ಕೆ ಪಡೆದಿದೆ. ಕಸ್ಟಡಿಗೆ ನೀಡಿ ನ್ಯಾಯಮೂರ್ತಿ ನಾಗೇಶ್ ನಾಯ್ಕ್ ಅವರು ಆದೇಶಿಸಿದ್ದಾರೆ. ವಿಶ್ವ ಅಲಿಯಾಸ್ ಗಿರೀಶ್ ನನ್ನು ಮತ್ತೆ 15 ದಿನ ಕಸ್ಟಡಿಗೆ ನೀಡುವಂತೆ ಸಿಐಡಿ(CID) ಮನವಿ ಮಾಡಿತ್ತು. ಈ ಹಿನ್ನಲೆಯಲ್ಲಿ ಮೇ 23ರಂದು ಹುಬ್ಬಳ್ಳಿಯ ಒಂದನೇ ಸಿವಿಲ್ ನ್ಯಾಯಾಲಯ, ಜೆಎಂಎಫ್ ಸಿ ಕೋರ್ಟ್ ವಿಚಾರಣೆ ನಡೆಸಿತ್ತು. ಈ ಸಂದರ್ಭದಲ್ಲಿ ಆರೋಪಿ ಕಣ್ಣೀರು ಹಾಕಿದ್ದಾನೆ ಎನ್ಲನಾಗಿದೆ. ಆಗ ಜಡ್ಜ್ ಕೃತ್ಯ ಎಸಗುವಾಗ ಇದು ಗೊತ್ತಾಗಲಿಲ್ಲವಾ ಎಂದು ಗದರಿಸಿದ್ದಾರೆ.
ರೈಲಿನಲ್ಲಿ ಕಿರಿಕ್ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿ ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ವಿಶ್ವ ಪೊಲೀಸ್ ಬಲೆಗೆ ಬಿದ್ದಿದ್ದ. ನಂತರ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆನಂತರ ಸರ್ಕಾರವು ತನಿಖೆಯನ್ನು ಸಿಐಡಿಗೆ ವಹಿಸಿತ್ತು.
ಅಂಜಲಿಯನ್ನು ನಾನು ಮೈಸೂರಿಗೆ ಬಾ ಎಂದು ಕರೆದಿದ್ದೆ. ಆಕೆ ಬರಲಿಲ್ಲ. ಜೊತೆಗೆ ಅಂಜಲಿ ಕೊಲೆಯಾಗುವ ಹಿಂದಿನ ದಿನವೇ 1000 ರೂಪಾಯಿ ಫೋನ್ ಪೇ ಕೂಡ ಮಾಡಿದ್ದೆ. 1000 ರೂ. ಹಣ ತೆಗೆದುಕೊಂಡು ನಂತರ ಆಕೆ ಆತನನ್ನು ಬ್ಲಾಕ್ ಮಾಡಿದ್ದಳು. ಅದೇ ಕಾರಣಕ್ಕೆ ಸಿಟ್ಟು ಬಂದು ಕೊಲೆ ಮಾಡಿದ್ದೇನೆ ಎಂದು ವಿಶ್ವ ಹೇಳಿದ್ದಾನೆ ಎನ್ನಲಾಗಿದೆ.