ಬೆಂಗಳೂರು: ಆಕಾಶವಾಣಿ ಬೆಂಗಳೂರು ಕೇಂದ್ರದ ಮುಖ್ಯವಾಹಿನಿಯಲ್ಲಿ, ಸಾಂದರ್ಭಿಕ ಕರಾರಿನ ಮೇರೆಗೆ ಉದ್ಯೋಷಕರಾಗಿ ಕಾರ್ಯ ನಿರ್ವಹಿಸಲು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಲಿಖಿತ ಪರೀಕ್ಷೆ, ಧ್ವನಿ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆಯಾದವರು ಸಾಂದರ್ಭಿಕ ಉದ್ವೇಷಕರಾಗಿ ಕಾರ್ಯ ನಿರ್ವಹಿಸಲು ಅರ್ಹರಾಗಿರುತ್ತಾರೆ.
ಸಾಮಾನ್ಯ ಅಭ್ಯರ್ಥಿಗಳು ರೂಪಾಯಿ 354 ರೂ. ಶುಲ್ಕ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ರೂಪಾಯಿ 266 ರೂ. ನಿಗದಿತ ಶುಲ್ಕ ಸಂದಾಯಮಾಡಿ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು ಅಧಿಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದವರಾಗಿರಬೇಕು. ಬೆಂಗಳೂರು ನಗರದ ನಿವಾಸಿಗಳಾಗಿರಬೇಕು. ಇದು ಕಾಯಂ ನೇಮಕಾತಿ ಅಲ್ಲ, ಸಾಂದರ್ಭಿಕ ನೇಮಕಾತಿ ಎಂದು ತಿಳಿಸಲಾಗಿದೆ.
ಕನ್ನಡ ಭಾಷೆಯ ಸ್ಪಷ್ಟ ಉಚ್ಚಾರ, ಸಾಹಿತ್ಯ, ಸಂಗೀತ, ಕಲೆ, ಸಂಸ್ಕೃತಿಗಳ ಪರಿಜ್ಞಾನ, ದೈನಂದಿನ ಆಗು-ಹೋಗುಗಳ ಬಗ್ಗೆ ತಿಳಿವಳಿಕೆ ಅತ್ಯವಶ್ಯ. ಕಂಪ್ಯೂಟರ್ ಜ್ಞಾನ ಇರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವಾಗ ಕನಿಷ್ಠ 21 ಹಾಗೂ ಗರಿಷ್ಠ 50 ವರ್ಷಗಳಾಗಿರಬೇಕು. ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಕೆಲಸದ ದಿನಗಳಲ್ಲಿ ಬೆಂಗಳೂರು ಆಕಾಶವಾಣಿ ಕೇಂದ್ರದಿಂದ ಪಡೆಯಬಹುದು. ಅರ್ಜಿಗಳನ್ನು ಆನ್ಲೈನ್ ಮೂಲಕ ಪಡೆಯಲು ಹಾಗೂ ಸಲ್ಲಿಸಲು ಅವಕಾಶವಿರುವುದಿಲ್ಲ.
ಅಭ್ಯರ್ಥಿಗಳು ಆಕಾಶವಾಣಿ ಬೆಂಗಳೂರು ಕೇಂದ್ರಕ್ಕೆ ಖುದ್ದಾಗಿ ಬಂದು ಅರ್ಜಿಗಳನ್ನು ಪಡೆಯಬಹುದು. ಸೋಮವಾರದಿಂದ ಶುಕ್ರವಾರದವರೆಗೆ (ರಜಾದಿನಗಳನ್ನು ಹೊರತುಪಡಿಸಿ) ಬೆಳಗ್ಗೆ ಹನ್ನೊಂದು ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಅರ್ಜಿಗಳನ್ನು ಪಡೆಯಬಹುದಾಗಿರುತ್ತದೆ. ಆಯ್ಕೆಯು ಬರಹದ ಪರೀಕ್ಷೆ, ಧ್ವನಿ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನ ಈ ಮೂರು ಹಂತಗಳಲ್ಲಿ ನಡೆಯುತ್ತದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ನಿಗದಿತ ಶುಲ್ಕ ಸಂದಾಯಮಾಡಿ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 23-05-2025
ಅರ್ಜಿ ಸಲ್ಲಿಸಬೇಕಾದ ವಿಳಾಸ : ನಿಲಯ ನಿರ್ದೇಶಕರು, ಕಾರ್ಯಕ್ರಮ ಸಮನ್ವಯ ವಿಭಾಗ, ಆಕಾಶವಾಣಿ, ಪ್ರಸಾರ ಭಾರತಿ, ರಾಜಭವನ ರಸ್ತೆ, ಬೆಂಗಳೂರು-560001.