ಮಂಗಳೂರಿನ ಹೊರವಲಯದಲ್ಲಿ ಮತ್ತೊಂದು ಭಯಾನಕ ಘಟನೆ ನಡೆದಿದ್ದು, ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ.
ಮುಂಜಾನೆ 3 ಗಂಟೆಗೆ ಮಾರುಕಟ್ಟೆಗೆ ಕೆಲಸಕ್ಕೆ ಹೋಗುತ್ತಿದ್ದ ಇರ್ಶಾದ್ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ತಕ್ಷಣವೇ ಮನೆಯೊಂದಕ್ಕೆ ಓಡಿಹೋಗಿ ಇರ್ಶಾದ್ ಜೀವ ಉಳಿಸಿಕೊಂಡಿದ್ದಾನೆ. ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಇರ್ಶಾದ್ ಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.