ರಾಯಚೂರು: ರಾಜ್ಯದಲ್ಲಿ ಬಾಣಂತಿಯರ ಸಾವಿನ ಸಂಖ್ಯೆ ಮತ್ತೆ ಏರಿಕೆಯಾಗುತ್ತಿರುವುದು ಆತಂಕಕ್ಕ ಕಾರಣವಾಗುತ್ತಿದೆ.
ರಾಯಚೂರಿನ (Raichuru) ರಿಮ್ಸ್ ಆಸ್ಪತ್ರೆಯಲ್ಲಿ (RIMS Hospital) ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿರುವ ಬಾಣಂತಿಯನ್ನು ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಸರಸ್ವತಿ (24) ಎಂದು ಗುರುತಿಸಲಾಗಿದೆ. ಈ ಮೂಲಕ ರಿಮ್ಸ್ ನಲ್ಲಿ ಬಾಣಂತಿಯರ ಸಾವಿನ ಸಂಖ್ಯೆ ನಾಲ್ಕು ತಿಂಗಳಲ್ಲಿ 12ಕ್ಕೆ ಏರಿಕೆ ಕಂಡಿದೆ.
ಜ. 2 ರಂದು ರಿಮ್ಸ್ ಆಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆಯಾಗಿತ್ತು. ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಜ.5 ಸಾವನ್ನಪ್ಪಿದ್ದಾರೆ. ವೆಂಟಿಲೇಟರ್ ನಲ್ಲಿ ಶಿಶುವಿಗೆ ಚಿಕಿತ್ಸೆ ಮುಂದುವರೆದಿದೆ. ನಾಲ್ಕನೇ ಮಗುವಿಗೆ ಜನ್ಮ ನೀಡಿದ್ದ ತಾಯಿ ಸರಸ್ವತಿ ಈಗ ಸಾವನ್ನಪ್ಪಿದ್ದು, ಮಕ್ಕಳು ಅನಾಥರಾಗಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.