ಹಾಸನ: ಜಿಲ್ಲೆಯಲ್ಲಿ ಮತ್ತೋರ್ವ ಯುವಕ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ಬೆಂಗಳೂರಿನ ಜೆಪಿ ನಗರದಲ್ಲಿ ನಿಶಾಂತ್(19) ಸಾವನ್ನಪ್ಪಿದ್ದಾರೆ. ಜಿಲ್ಲೆಯ ಹೊಳೆನರಸೀಪುರ ಪಟ್ಟಣದ ನಿವಾಸಿ ನಿಶಾಂತ್ ಸಾವನ್ನಪ್ಪಿರುವ ದುರ್ದೈವಿ ಎನ್ನಲಾಗಿದೆ. ನಿಶಾಂತ್ ಪಟ್ಟಣದ ಚನ್ನಕೇಶವ ಹಾಗೂ ಜ್ಯೋತಿ ದಂಪತಿಯ ಮಗ.
ಇತ್ತೀಚೆಗಷ್ಟೇ ಹಾಸನ ಮೂಲದ ನಾಲ್ವರು ಹದಿಹರೆಯದ ವಯಸ್ಸಿನಲ್ಲೇ ಹೃದಯಾಘಾತಕ್ಕೆ ಬಲಿಯಾಗಿದ್ದರು. ಎರಡು ತಿಂಗಳ ಅಂತರದಲ್ಲಿ ಹಾಸನ ಜಿಲ್ಲೆಯ ಮೂಲದ ನಾಲ್ವರು ಸಾವನ್ನಪ್ಪಿದ್ದಾರೆ. ಇಬ್ಬರು ಯುವತಿಯರು, ಇಬ್ಬರು ಯುವಕರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ನಿಶಾಂತ್ ಕಳೆದ 15 ದಿನಗಳ ಹಿಂದೆ ಬೆಂಗಳೂರಿಗೆ ಹೋಗಿದ್ದ. ಡಿಪ್ಲೊಮಾ ಮುಗಿಸಿ ಕೈಗಾರಿಕಾ ತರಬೇತಿ ಸಲುವಾಗಿ ಬೆಂಗಳೂರಿಗೆ ಆಗಮಿಸಿದ್ದ. ಆದರೆ, ಇಂದು ರೂಮ್ ನಲ್ಲಿ ಇದ್ದ ವೇಳೆ ಹೃದಯಾಘಾತ ಸಂಭವಿಸಿದೆ.