ಕರ್ನಾಟಕದಲ್ಲಿ ಗ್ರಾಮ ಪಂಚಾಯತಿಗಳು ಆರೋಗ್ಯ ರಕ್ಷಣೆ, ಘನತ್ಯಾಜ್ಯ ನಿರ್ವಹಣೆ, ಗ್ರಂಥಾಲಯ ಅಭಿವೃದ್ಧಿ ಮುಂತಾದ ಕ್ಷೇತ್ರಗಳಲ್ಲಿ ನಾಯಕತ್ವದ ಸಾಮರ್ಥ್ಯ ಪ್ರದರ್ಶಿಸಿವೆ. ಈ ದಿಸೆಯಲ್ಲಿ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಸ್ಥಾಪಿಸಲಾಗುವ “ಸಾಮಾಜಿಕವಾಗಿ ಸ್ಪಂದಿಸುವ ಸ್ಥಳೀಯ ಆಡಳಿತ ಕೋಶ”ದಲ್ಲಿ ಕಾರ್ಯನಿರ್ವಹಿಸಲು ಒಬ್ಬರು ವಿಷಯ ಪರಿಣತರು ಮತ್ತು ಇಬ್ಬರು ಯುವವೃತ್ತಿಪರರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೇ 29 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ವಿಷಯ ಪರಿಣತರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಸಮಾಜ ಶಾಸ್ತ್ರ/ಸಮಾಜ ಕಾರ್ಯ/ಗ್ರಾಮೀಣಾಭಿವೃದ್ಧಿ/ ಸಾರ್ವಜನಿಕ ನೀತಿ ಸೇರಿ ಯಾವುದಾದರೂ ವಿಷಯದಲ್ಲಿ ಪದವಿ ಪಡೆದಿರಬೇಕು. ಸಾಮಾಜಿಕ ಅಭಿವೃದ್ಧಿ ಕ್ಷೇತ್ರದಲ್ಲಿ ಕನಿಷ್ಟ 5ರಿಂದ 8 ವರ್ಷಗಳ ಕ್ಷೇತ್ರ ಮಟ್ಟದ ಅನುಭವ ಹೊಂದಿರಬೇಕು. ಪಂಚಾಯತ್ ರಾಜ್ ಕಾಯ್ದೆ ವಿಕೇಂದ್ರೀಕೃತ ಪಂಚಾಯತ್ ರಾಜ್ ವ್ಯವಸ್ಥೆ, ಸಹಭಾಗಿತ್ವದಲ್ಲಿ ಸಮುದಾಯ ಯೋಜನ ಸಿದ್ಧಪಡಿಸುವುದು ಕುರಿತಂತೆ ಜ್ಞಾನ ಮತ್ತು ಅನುಭವವಿದ್ದರೆ ಆದ್ಯತೆ ನೀಡಲಾಗುತ್ತದೆ.
ಯುವ ವೃತ್ತಿಪರರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಸಮಾಜ ಶಾಸ್ತ್ರ/ಸಮಾಜ ಕಾರ್ಯ/ಗ್ರಾಮೀಣಾಭಿವೃದ್ಧಿ ಸೇರಿ ಯಾವುದಾದರೂ ವಿಷಯದಲ್ಲಿ ಪದವಿ ಪಡೆದಿರಬೇಕು. ಆರೋಗ್ಯ, ಶಿಕ್ಷಣ, ಗ್ರಾಮೀಣಾಭಿವೃದ್ಧಿ, ಮಕ್ಕಳು ಮತ್ತು ಮಹಿಳೆಯರು, ಶಿಕ್ಷಣ. ಮಕ್ಕಳು ವಿಶೇಷ ಚೇತನರು, ಹಿರಿಯ ನಾಗರಿಕರಿಗೆ ಸಂಬಂಧಿಸಿದ ಯಾವುದಾದರೂ ಎರಡು ಕ್ಷೇತ್ರಗಳಲ್ಲಿ ಕನಿಷ್ಠ ಎರಡು ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು.
ಷರತ್ತುಗಳು ಏನೇನು?
- ವಿಷಯ ಪರಿಣತರ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 30 ವರ್ಷ ಆಗಿರಬೇಕು.
- ಯುವ ವೃತ್ತಿಪರರ ಹುದ್ದೆಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 35 ವರ್ಷ ಆಗಿರಬೇಕು.
- ಕಡ್ಡಾಯವಾಗಿ ಕನ್ನಡವನ್ನು ಮಾತನಾಡಲು, ಓದಲು ಮತ್ತು ಬರೆಯಲು ತಿಳಿದಿರಬೇಕು, ಇಂಗ್ಲಿಷ್ ಭಾಷೆಯ ಜ್ಞಾನ ಹೊಂದಿರಬೇಕು.
- ಕಂಪ್ಯೂಟರ್ ಜ್ಞಾನ ಮತ್ತು ಕೌಶಲ್ಯ ಹೊಂದಿರಬೇಕು, ಮುಖ್ಯವಾಗಿ MS-Word, MS Excel ಮತ್ತು MS-Power Point ಗಳನ್ನು ಬಳಸಲು ತಿಳಿದಿರಬೇಕು.
- ಪಂಚಾಯತ್ ರಾಜ್ ವ್ಯವಸ್ಥೆ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಇರಬೇಕು.
- “ಸಾಮಾಜಿಕವಾಗಿ ಸ್ಪಂದಿಸುವ ಸ್ಥಳೀಯ ಆಡಳಿತ ಕೋಶ”ದ ಗುರಿಯನ್ನು ಸಾಧಿಸಲು ಗ್ರಾಮ ಪಂಚಾಯತಿಗಳು ಸೇರಿದಂತೆ ವಿವಿಧ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿರಬೇಕು. ಭಾಗೀದಾರರೊಂದಿಗೆ ಪರಿಣಾಮಕಾರಿಯಾಗಿ
- ಕ್ಷೇತ್ರಮಟ್ಟದಲ್ಲಿ ಗ್ರಾಮ ಪಂಚಾಯತಿಗಳು ಮತ್ತು ಸಮುದಾಯದೊಂದಿಗೆ ಕೆಲಸ ಮಾಡಲು ಮತ್ತು ಅಗತ್ಯವಿದ್ದಲ್ಲಿ ಯಾವುದೇ ಗ್ರಾಮ ಪಂಚಾಯತಿಗೆ ಪ್ರಯಾಣಿಸಲು ಸಿದ್ಧರಿರಬೇಕು.
- ಆಯ್ಕೆಯಾದ ಯುವ ವೃತ್ತಿಪರರು ಕಡ್ಡಾಯವಾಗಿ ಸ್ವಂತ ಲ್ಯಾಪ್ ಟಾಪ್ ತರುವುದು.
ಆಯ್ಕೆ ಹೇಗೆ? ಸಂಬಳ ಎಷ್ಟು?
ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳ ವಿದ್ಯಾರ್ಹತೆ, ಅನುಭವ ಮತ್ತು ಕೌಶಲವನ್ನು ಆಧರಿಸಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಮತ್ತು ಮೌಖಿಕ ಸಂದರ್ಶನದ ಮೂಲಕ ನೇಮಕಾತಿ ಮಾಡಲಾಗುವುದ. ವಿಷಯ ಪರಿಣತರಿಗೆ 1 ಲಕ್ಷ ರೂಪಾಯಿ ಹಾಗೂ ಯುವ ವೃತ್ತಿಪರರಿಗೆ 75 ಸಾವಿರ ರೂ. ಸಂಬಳ ಇರಲಿದೆ
ಅಭ್ಯರ್ಥಿಗಳು ನಿಗದಿಪಡಿಸಲಾದ ಅರ್ಹತೆಗಳು ಮತ್ತು ಅನುಭವಗಳಿಗೆ ಅನುಗುಣವಾಗಿ ಸ್ವ-ವಿವರಗಳನ್ನು ಒಳಗೊಂಡ ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ಖುದ್ದಾಗಿ ಪಂಚಾಯತ್ ರಾಜ್ ಆಯುಕ್ತಾಲಯ, ಕಾಳಿದಾಸ ರಸ್ತೆ, ಗಾಂಧಿನಗರ, ಬೆಂಗಳೂರು ವಿಳಾಸಕ್ಕೆ ಕಳುಹಿಸಬೇಕು. ದಾಖಲೆಗಳನ್ನು pre.recruitment@kugov.in ಇ ಮೇಲ್ ಮೂಲಕವೂ ಸಲ್ಲಿಸಬಹುದಾಗಿದೆ.