ಬೆಂಗಳೂರು: ಕನ್ನಡದಲ್ಲಿ ಉತ್ತಮ ಹಾಗೂ ವಿಭಿನ್ನ ಕಂಟೆಂಟ್ ಹೊಂದಿರುವ “ನಾಗವಲ್ಲಿ ಬಂಗಲೆ” ನಿರ್ಮಾಣವಾಗಿದೆ.
ಅರಿಷಡ್ವರ್ಗಗಳಾದ ಕಾಮ, ಕ್ರೋಧ, ಲೋಭ,ಮೋಹ, ಮದ, ಮತ್ಸರ ಎಂಬ ಆರು ಗುಣಗಳನ್ನು ಪ್ರತಿನಿಧಿಸುವ ಆರು ಪಾತ್ರಗಳ ಜೊತೆಗೆ ಮತ್ತೊಂದು ವಿಶೇಷ ಪಾತ್ರವಿರುವ “ನಾಗವಲ್ಲಿ ಬಂಗಲೆ” ಚಿತ್ರ ಈ ವಾರ ಅಂದರೆ ಫೆ. 28ರಂದು ತೆರೆಗೆ ಬರಲಿದೆ.
ಈ ಚಿತ್ರವನ್ನು ಹಂಸ ವಿಷನ್ಸ್ ಲಾಂಛನದಲ್ಲಿ ನೆ.ಲ. ಮಹೇಶ್ ಮತ್ತು ನೇವಿ ಮಂಜು ನಿರ್ಮಿಸಿದ್ದಾರೆ. ಕವಿ ರಾಜೇಶ್ ನಿರ್ದೇಶನ, ರೋಹನ್ ದೇಸಾಯಿ ಅವರ ಸಂಗೀತ, ಜೆ.ಎಂ. ಪ್ರಹ್ಲಾದ್ ಅವರ ಕಥೆ -ಚಿತ್ರಕಥೆ-ಸಂಭಾಷಣೆ ಈ ಚಿತ್ರಕ್ಕಿದೆ. ಈ ಚಿತ್ರದ ಪ್ರಮುಖ ತಾರಾಬಳಗದಲ್ಲಿ ನೆ.ಲ.ನರೇಂದ್ರಬಾಬು, ಯಶ್, ತೇಜಸ್ವಿನಿ, ನೇವಿ ಮಂಜು, ರೂಪಶ್ರೀ ಸೇರಿದಂತೆ ಮುಂದಾದವರು ಇದ್ದಾರೆ.