ದಾವಣಗೆರೆ :ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಮೇಲೆ ಚೇರ್ ಹಾಗೂ ನೀರಿನ ಜಗ್ನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಹರಿಹರ ಹೆದ್ದಾರಿ ಪಕ್ಕದ ಡಾಬಾದಲ್ಲಿ ಈ ಘಟನೆ ನಡೆದಿದೆ. ಹರಿಹರ ತಾಲೂಕಿನ ರಾಜನಹಳ್ಳಿ ಗ್ರಾಮದ ಯುವಕನ ಮೇಲೆ ಮಾರಣಾಂತಿಕ ದಾಳಿ ನಡೆದಿದ್ದು, ಭಯಾನಕ ದಾಳಿಯ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಘಟನೆಯ ವಿಡಿಯೋ ವೈರಲ್ ಆಗುತ್ತಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.