ಬೆಂಗಳೂರು: ರಾಷ್ಟ್ರೀಯ ತನಿಖಾ ದಳದಿಂದ ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ದಾಳಿ ನಡೆದಿದೆ.
ಭಾರತವನ್ನು ಅಸ್ಥಿರಗೊಳಿಸುವ ಅಲ್ಖೈದಾ ಉಗ್ರ ಸಂಘಟನೆಯ ಸಂಚಿಗೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎನ್ನಲಾಗಿದೆ. ಭಾರತದಲ್ಲಿ ನೆಲೆಸಿರುವ ಬಾಂಗ್ಲಾದೇಶ ಪ್ರಜೆಗಳು ಅಲ್ ಖೈದಾ ಜೊತೆಗೆ ನಂಟು ಹೊಂದಿದ್ದು, ಅಲ್ ಖೈದಾ ಉಗ್ರ ಸಂಘಟನೆ ಕುರಿತು ಪ್ರಚಾರ, ಚಟುವಟಿಕೆಗಳನ್ನು ಬೆಂಬಲಿಸುವ ಮತ್ತು ಧನಸಹಾಯ ಮಾಡುವ ವ್ಯಕ್ತಿಗಳ ವಿರುದ್ದ ಜಮ್ಮು-ಕಾಶ್ಮೀರ, ಕರ್ನಾಟಕ, ಪಶ್ಚಿಮ ಬಂಗಾಳ, ಬಿಹಾರ, ಆಸ್ಸಾಂನ 9 ಪ್ರದೇಶಗಳ ಮೇಲೆ ದಾಳಿ ನಡೆದಿದೆ.
ಎನ್ ಐಎ ಅಧಿಕಾರಿಗಳು ಕಾರ್ಯಾಚಾರಣೆ ವೇಳೆ ಬ್ಯಾಂಕಿಂಗ್ ವಹಿವಾಟುಗಳು, ಮೊಬೈಲ್ ಫೋನ್, ಡಿಜಿಟಲ್ ಸಾಧನಗಳು ಮತ್ತು ಭಯೋತ್ಪಾದಕ ನಿಧಿ ಚಟುವಟಿಕೆಗಳಿಗೆ ಸಂಬಂಧಿಸಿದ ದಾಖಲೆ ವಶಕ್ಕೆ ಪಡೆಯಲಾಗಿದೆ.
ನಾಲ್ವರು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ ಐವರು ಆರೋಪಿಗಳ ವಿರುದ್ಧ ಎನ್ಐಎ ಚಾರ್ಜ್ಶೀಟ್ ಸಲ್ಲಿಸಿತ್ತು. ಐವರು ಆರೋಪಿಗಳು ತಮ್ಮ ಚಟುವಟಿಕೆಗಳನ್ನು ಗೌಪ್ಯವಾಗಿ ನಡೆಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದರು ಎಂಬುವುದು ಅವರ ಪೂರ್ವಾಪರದ ಬಗ್ಗೆ ಎನ್ ಐಎ ತನಿಖೆ ನಡೆಸಿದಾಗ ತಿಳಿದು ಬಂದಿತ್ತು. ಸದ್ಯ ಅಧಿಕಾರಿಗಳು ಪರಿಶೀಲನ ನಡೆಸಿದ್ದಾರೆ.