ಮೈಸೂರು: ಅಕ್ರಮ ಮರಳು ಸಾಗಾಣೆ ಮಾಡುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಸಾಲಿಗ್ರಾಮದಲ್ಲಿ ನಡೆದಿದೆ. ಚಂದ್ರಶೇಖರ್ (28) ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಜಿನೇಂದ್ರ ಚಂದು ಎಂಬುವವರು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.
ಜಿನೇಂದ್ರ ಚಂದು ಕಾಂಗ್ರೆಸ್ ಕಾರ್ಯಕರ್ತನಾಗಿದ್ದು, ಈತ ಸಾಲಿಗ್ರಾಮದ ಬಳ್ಳೂರು ಕಟ್ಟೆಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ. ಆಗ ಚಂದ್ರು ಬಂದು ಪ್ರಶ್ನೆ ಮಾಡಿದಾಗ ಜಿನೇಂದ್ರ ಚಂದು ಪೈಪ್ ರಾಡ್ಗಳಿಂದ ತಲೆ ಭುಜ ಕಣ್ಣಿಗೆ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.
ಚಂದ್ರಶೇಖರ್ನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿ ಜಿನೇಂದ್ರ ಚಂದು ಹಲ್ಲೆ ನಂತರ ಎಸ್ಕೇಪ್ ಆಗಿದ್ದು ಪೋಲೀಸರು ಹುಡುಕಾಟ ನಡೆಸಿದ್ದಾರೆ.