ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕಾರಕ್ಕೆ ಯತ್ನಿಸಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು, ರೌಡಿಶೀಟರ್ ಕೋಡಿಕೆರೆ ಲೋಕೇಶ್ ನನ್ನು ಬಂಧಿಸಿದ್ದಾರೆ.
ಕಾವೂರು ಪೊಲೀಸರಿಂದ ಕೋಡಿಕೆರೆ ಲೋಕೇಶ್ ನನ್ನು ಬಂಧಿಸಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆಯಾದ ರಾತ್ರಿ ಲೋಕೇಶ್ ಕೋಡಿಕೆರೆ ಗ್ಯಾಂಗ್ ಪ್ರತಿಕಾರಕ್ಕೆ ಯತ್ನಿಸಿತ್ತು ಎನ್ನಲಾಗಿದೆ.
ನಗರದ ಹೊರವಲಯದ ಕುಂಟಿಕಾನ ಬಳಿ ಮೀನು ವ್ಯಾಪಾರಿಯನ್ನು ಅಟ್ಟಾಡಿಸಿ, ಕಲ್ಲು ಎತ್ತಿ ಹಾಕಿ ಕೊಲೆಗೆ ಯತ್ನಿಸಲಾಗಿತ್ತು ಎನ್ನಲಾಗಿದೆ. ಇದನ್ನು ಕಂಡ ಮೀನುಗಾರ ಮಹಿಳೆ ಬೊಬ್ಬೆ ಹಾಕಿ, ಅನಾಹುತ ತಪ್ಪಿಸಿದ್ದರು.
ಘಟನೆಯಲ್ಲಿ ಉಳ್ಳಾಲ ನಿವಾಸಿ ಲುಕ್ಮಾನ್ ಹಲ್ಲೆಗೊಳಗಾಗಿದ್ದ. ಕಾರಿನಲ್ಲಿ ಬಂದಿದ್ದ ಲೋಕೇಶ್ ಗ್ಯಾಂಗ್ ಅಟ್ಯಾಕ್ ಮಾಡಿತ್ತು ಎನ್ನಲಾಗಿದೆ.