ಮಂಗಳೂರು : ಪುತ್ತೂರಿನ ಜಿಡೆಕಲ್ಲು ಬಳಿ ಇಂದು ಮುಂಜಾನೆ ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ವಾಹನವನ್ನು ಭಜರಂಗದಳ ಕಾರ್ಯಕರ್ತರು ತಡೆದು, ಓರ್ವನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಪಿಕ್ಅಪ್ ವಾಹನದಲ್ಲಿ ಜಾನುವಾರುಗಳನ್ನು ಅಕ್ರಮ ಸಾಗಿಸಲಾಗುತ್ತಿತ್ತು. ವಾಹನವನ್ನು ತಡೆದು ಪರಿಶೀಲಿಸಿದಾಗ ಮೂರು ಹಸುಗಳು ಹಾಗೂ ಒಂದು ಹೋರಿ ಪತ್ತೆಯಾಗಿವೆ. ವಾಹನದಲ್ಲಿದ್ದ ಮೂವರ ಪೈಕಿ ಒಬ್ಬನನ್ನು ಭಜರಂಗದಳ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಉಳಿದವರು ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಅವರ ಪತ್ತೆಗೆ ಬಲೆ ಬೀಸಿದ್ದಾರೆ.
ಜಿಡೆಕಲ್ಲು ಭಾಗದಲ್ಲಿ ಮುಂಜಾನೆ ಭಜರಂಗದಳ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ವಾಹನವನ್ನು ತಡೆದಿದ್ದಾರೆ. ಜಾನುವಾರುಗಳನ್ನು ಸಾಗಿಸುತ್ತಿದ್ದ ರೀತಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಕಾರ್ಯಕರ್ತರು, ಅಕ್ರಮ ಗೋ ಸಾಗಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ವಾಹನ ಹಾಗೂ ಜಾನುವಾರುಗಳನ್ನು ವಶಕ್ಕೆ ಪಡೆದು, ಸಾಗಾಟದ ಉದ್ದೇಶ ಮತ್ತು ದಾಖಲೆಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣದ ಸಂಪೂರ್ಣ ಮಾಹಿತಿ ತನಿಖೆ ಬಳಿಕ ಹೊರಬರಬೇಕಿದೆ.
ಇದನ್ನೂ ಓದಿ : ನಕಲಿ ಔಷಧಿ ಜಾಲದ ಕಿಂಗ್ಪಿನ್ ವಿದೇಶದಲ್ಲಿ ಬಂಧನ!



















