ಚಾಮರಾಜಪೇಟೆ ಮೈದಾನದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ.
ಸಾವಿರಾರು ಜನ ಮುಸ್ಲಿಂರು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದಾರೆ. ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. 500ಕ್ಕೂ ಹೆಚ್ಚು ಪೊಲೀಸರಿಂದ ಮೈದಾನದ ಸುತ್ತ ಬಂದೋಬಸ್ತ್ ಕಲ್ಪಿಸಲಾಗಿತ್ತು. ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ನಿಧನರಾದವರಿಗೆ ಮೌಲ್ವಿ ಸಂತಾಪ ಸೂಚಿಸಿದ್ದಾರೆ.
ನಮಾಜ್ ವೇಳೆ ಆರ್ ಸಿಬಿ ದುರಂತದಲ್ಲಿ ಸತ್ತವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಲಾಯಿತು. ಮೌನಾಚರಣೆ ಮೂಲಕ ಮೌಲ್ವಿ ಸಂತಾಪ ಸೂಚಿಸಿದರು.
ಈ ವೇಳೆ ಮಾತನಾಡಿರುವ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಕೆ. ಅಲ್ತಾಫ್, ಬಕ್ರೀದ್ ಹಬ್ಬದ ಹಾರ್ಧಿಕ ಶುಭಾಶಯಗಳು.ವಿಜಯೋತ್ಸವದಲ್ಲಿ ಅಗಲಿದವರ ಆತ್ಮಕ್ಕೆ ಪ್ರಾರ್ಥನೆ ಮಾಡಿದ್ದೇವೆ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದ್ದೇವೆ ಎಂದಿದ್ದಾರೆ.
ಆರ್ ಸಿಬಿ ಕಾಲ್ತುಳಿತದ ದುರಂತದ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಾರ್ಥನೆಗೆ ಸಿಎಂ ಗೈರಾಗಿದ್ದಾರೆ. ಜಮೀರ್ ಅಹ್ಮದ್ ಕೂಡ ನಮಾಜ್ ಗೆ ಗೈರಾಗಿದ್ದಾರೆ.