ನವದೆಹಲಿ: ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದ ಡಾ. ಸಿ.ಎನ್. ಮಂಜುನಾಥ್(Dr. C.N. Manjunath) ಅವರು ಕೇಂದ್ರ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು(Ram Mohan Naidu) ಅವರನ್ನು ಭೇಟಿ ಮಾಡಿ ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣ ಸ್ಥಾಪಿಸುವ ಕುರಿತು ಚರ್ಚೆ ನಡೆಸಿದ್ದಾರೆ.
ಬೆಂಗಳೂರು ನಗರ ಇಡೀ ಪ್ರಪಂಚದಲ್ಲಿ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ನಗರದಲ್ಲಿ 750ಕ್ಕೂ ಅಧಿಕ ಮಲ್ಟಿ ನ್ಯಾಷನಲ್ ಕಂಪನಿಗಳು ಕಾರ್ಯ ನಿರ್ವಹಿಸುತ್ತಿವೆ. ಹೀಗಾಗಿ ಪ್ರತಿದಿನ ಲಕ್ಷಾಂತರ ಜನ ಬೆಂಗಳೂರಿಗೆ ಬಂದು ಹೋಗುತ್ತಾರೆ. ಹೀಗಾಗಿ ಸದ್ಯ ಕಾರ್ಯನಿರ್ವಹಿಸುತ್ತಿರುವ ಏರ್ಪೋರ್ಟ್ ನಲ್ಲಿ ಏರ್ ಟ್ರಾಫಿಕ್ ಉಂಟಾಗುತ್ತಿದೆ.
ಹೀಗಾಗಿ ಬೆಂಗಳೂರು ನಗರಕ್ಕೆ ಎರಡನೆಯ ಏರ್ ಪೋರ್ಟ್ ನ ಅವಶ್ಯಕತೆ ಇದೆ. ಈ ವಿಚಾರವನ್ನು ಈಗಾಗಲೇ ಎಚ್.ಡಿ. ದೇವೇಗೌಡ ಅವರು ರಾಜ್ಯಸಭೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ. ನಾನು ಕೂಡ ಇದಕ್ಕೆ ಧ್ವನಿಗೂಡಿಸುತ್ತೇನೆ ಎಂದು ಹೇಳಿದ್ದಾರೆ.