ಬೆಂಗಳೂರು : ಕೊಲೆಯಾದ ರೀತಿಯಲ್ಲಿ ವಿದ್ಯಾರ್ಥಿನಿಯೊಬ್ಬಳು ಶವವಾಗಿ ಪತ್ತೆಯಾದ ಘಟನೆ ಬೆಂಗಳೂರಿನ ನೆಲಮಂಗಲ ಬಳಿ ನಡೆದಿದೆ. ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ದೇವಿಶ್ರೀ (21) ಕೊಲೆಯಾದ ರೀತಿಯಲ್ಲಿ ಪತ್ತೆಯಾದ ವಿದ್ಯಾರ್ಥಿನಿ.
ನೆಲಮಂಗಲ ಬಳಿಯ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತಮ್ಮೇನಹಳ್ಳಿಯ ಪಿಜಿಯಲ್ಲಿ ಘಟನೆ ನಡೆದಿದ್ದು, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಕೆಯ ಜೊತೆ ರೂಮ್ಗೆ ಬಂದಿದ್ದ ಆಕೆಯ ಸ್ನೇಹಿತ ಘಟನೆ ಬಳಿಕ ನಾಪತ್ತೆಯಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ಬೆನ್ನತ್ತಿದ್ದಾರೆ.
ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಬಿಕ್ಕಿಂವರೀಪಲ್ಲಿ ಗ್ರಾಮದ ರೆಡ್ಡಪ್ಪ ಜಗದಂಭ ದಂಪತಿಯ ಮಗಳಾದ ದೇವಿಶ್ರೀ, ಹೆಚ್ಚಿನ ವಿದ್ಯಾಭ್ಯಾಸಕ್ಕೆಂದು ಬೆಂಗಳೂರಿಗೆ ಬಂದಿದ್ದಳು. ಪ್ರತಿಷ್ಠಿತ ಕಾಲೇಜಿನಲ್ಲಿ ಬಿಬಿಎಂ ವ್ಯಾಸಂಗ ಮಾಡುತ್ತಿದ್ದ ಈಕೆ, ತಮ್ಮೇನಹಳ್ಳಿಯ ಪಿಜಿಯೊಂದರಲ್ಲಿ ವಾಸವಾಗಿದ್ದಳು. ಘಟನೆಗೆ ನಿಖರ ಕಾರಣ ಗೊತ್ತಾಗಿಲ್ಲ. ಆದರೆ, ನಾಪತ್ತೆಯಾಗಿರುವ ಆಕೆಯ ಸ್ನೇಹಿತನಿಗಾಗಿ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ : ಉಡುಪಿ | ನ.28ರಂದು ಪ್ರಧಾನಿ ಮೋದಿ ಭೇಟಿ.. ಪ್ರಮುಖ ರಸ್ತೆಗಳ ಸಂಚಾರ ಬದಲಾವಣೆ!


















