ಬೆಂಗಳೂರು : ಬ್ಯಾಂಕ್ ಸಿಬ್ಬಂದಿಯವರು ನಾಳೆ (ಜ.27) ರಂದು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದಾರೆ. ವಾರದಲ್ಲಿ ಆರು ದಿನದ ಬದಲು ಐದು ದಿನ ಮಾತ್ರ ಕೆಲಸ ಮಾಡುವಂತೆ ಒತ್ತಾಯಿಸಿ, ಕೆಲಸದ ಅವಧಿ ಕಡಿತಕ್ಕೆ ಆಗ್ರಹಿಸುತ್ತಿದ್ದಾರೆ. ಈ ಕಾರಣದಿಂದಾಗಿ ನಾಳೆ ಎಲ್ಲಾ ಬ್ಯಾಂಕ್ ಶಾಖೆಗಳಲ್ಲಿ ಯಾವುದೇ ಸೇವೆ ಲಭ್ಯವಿರುವುದಿಲ್ಲ.
ಕಳೆದ ಮೂರು ದಿನಗಳಿಂದ ಕೆಲವು ಬ್ಯಾಂಕ್ ಶಾಖೆಗಳಲ್ಲಿ ರಜೆ ಇರುವ ಹಿನ್ನೆಲೆಯಲ್ಲಿ, ಕಳೆದ ಮೂರು ದಿನಗಳಿಂದಲೂ ಬ್ಯಾಂಕ್ ರಜೆಯಿದ್ದಿದ್ದರಿಂದ ನಾಳೆ ಈ ಮುಷ್ಕರಕ್ಕೆ ಕರೆ ನೀಡಲಾಗಿದೆ. ಹೀಗಾಗಿ ನಗದು ವಿತರಣೆ, ಚೆಕ್ ಕ್ಲಿಯರೆನ್ಸ್, ಡಿಮ್ಯಾಂಡ್ ಡ್ರಾಫ್ಟ್ ಸೇರಿದಂತೆ ಶಾಖೆ ಆಧಾರಿತ ಎಲ್ಲಾ ಬ್ಯಾಂಕ್ ಸೇವೆಗಳಲ್ಲಿ ವ್ಯತ್ಯಯವಾಗುತ್ತದೆ.
ಆದರೆ, ಮೊಬೈಲ್ ಬ್ಯಾಂಕಿಂಗ್ ಮತ್ತು ಇಂಟರ್ನೆಟ್ ಬ್ಯಾಂಕಿಂಗ್ ಸೇವೆಗಳಲ್ಲಿ ಯಾವುದೇ ಸಮಸ್ಯೆ ಕಾಣಿಸಿಕೊಳ್ಳುವುದಿಲ್ಲ. ಗ್ರಾಹಕರು ಈ ಡಿಜಿಟಲ್ ಚಾನಲ್ಗಳ ಮೂಲಕ ತಮ್ಮ ವ್ಯವಹಾರಗಳನ್ನು ನಿರ್ವಹಿಸಬಹುದು. ತುರ್ತು ಹಣ ವಿತರಣೆ ಅಥವಾ ಬ್ಯಾಂಕ್ ಸಿಬ್ಬಂದಿಯ ಸಹಾಯ ಅಗತ್ಯವಿರುವ ವ್ಯವಹಾರಗಳಿಗಾಗಿ ಪರೋಕ್ಷ ತಯಾರಿ ಮಾಡಿಕೊಂಡಿರುವಂತೆ ಬ್ಯಾಂಕ್ ಅಧಿಕಾರಿಗಳು ಮನವಿ ಮಾಡುತ್ತಿದ್ದಾರೆ.
ಇದನ್ನೂ ಓದಿ : ಚಿಕ್ಕಬಳ್ಳಾಪುರ ಸರ್ಕಾರಿ ಶಾಲೆಯಲ್ಲಿ ರಾಷ್ಟ್ರ ಧ್ವಜ ಉಲ್ಟಾ ಹಾರಿಸಿ ಎಡವಟ್ಟು


















