ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ ಮಾಡಿರುವ ಘಟನೆಯೊಂದು ನಡೆದಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ಈ ಘಟನೆ ನಡೆದಿದೆ. ನಗರದ ಜಿಆರ್ ಬಿಸಿ ಕಚೇರಿ ಎದುರು ಈ ಘಟನೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಪರಶುರಾಮ್ ಗೊಂಧಳಿ(26) ಎಂಬಾತನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.
ಗ್ರಾಮದಲ್ಲಿ ಜಾತ್ರೆಯಿದ್ದ ವೇಳೆಯೇ ಈ ದುರ್ಘಟನೆ ನಡೆದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಜಾತ್ರಾ ಖುಷಿಯಲ್ಲಿದ್ದವರಿಗೆ ಸೂತಕದ ಛಾಯೆ ಆವರಿಸಿದೆ. ಪರಶುರಾಮ್ ಮೇಲೆ ಏಕಾಏಕಿ ದಾಳಿ ಮಾಡಿದ ಗ್ಯಾಂಗ್, ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ. ತೀವ್ರ ರಕ್ತಸ್ರಾವದಿಂದ ಪರಶುರಾಮ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ. ಸ್ಥಳಕ್ಕೆ ಗೋಕಾಕ್ ಶಹರ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.