ಬೆಂಗಳೂರು : ಕರ್ನಾಟಕ ಸರ್ಕಾರದ ಬಸವ ವಸತಿ ಯೋಜನೆಯು (ಆಶ್ರಯ ಯೋಜನೆ) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ (EWS) ಸ್ವಂತ ಮನೆ ನಿರ್ಮಿಸಿಕೊಳ್ಳಲು ಸಹಾಯಧನ ನೀಡುವ ಮಹತ್ವದ ಯೋಜನೆಯಾಗಿದೆ. ರಾಜೀವ್ ಗಾಂಧಿ ವಸತಿ ನಿಗಮದ (RGRHCL) ಮೂಲಕ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಹಾಗಾಗಿ, ಅರ್ಹ ಫಲಾನುಭವಿಗಳು ಅರ್ಜಿಗಳನ್ನು ಸಲ್ಲಿಸುವ ಮೂಲಕ ಯೋಜನೆಯ ಲಾಭ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಕೆ ವಿಧಾನ ಸೇರಿ ವಿವಿಧ ಮಾಹಿತಿ ಇಲ್ಲಿದೆ.
ಏನೆಲ್ಲ ಸಿಗಲಿವೆ ಸೌಲಭ್ಯಗಳು?
• ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಾಣಕ್ಕಾಗಿ ಸುಮಾರು 1.5 ಲಕ್ಷದಿಂದ 2 ಲಕ್ಷ ರೂ.ವರೆಗೆ ಆರ್ಥಿಕ ನೆರವು ಸಿಗಲಿದೆ.
• ಗ್ರಾಮೀಣ ಭಾಗದ ಫಲಾನುಭವಿಗಳಿಗೆ ಮನೆ ನಿರ್ಮಾಣಕ್ಕೆ ಅಗತ್ಯವಿರುವ ಸುಮಾರು 85% ರಷ್ಟು ಕಚ್ಚಾ ವಸ್ತುಗಳನ್ನು ಸರ್ಕಾರವೇ ಒದಗಿಸುತ್ತದೆ.
• ಅನುಷ್ಠಾನ ಸಂಸ್ಥೆ: ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ (RGRHCL).
ಅರ್ಜಿ ಸಲ್ಲಿಸಲು ಅರ್ಹತೆಗಳು
• ಅರ್ಜಿದಾರರು ಕರ್ನಾಟಕದ ಕಾಯಂ ನಿವಾಸಿಯಾಗಿರಬೇಕು.
• ಕುಟುಂಬದ ವಾರ್ಷಿಕ ಆದಾಯವು 32,000 ರೂ.ಗಿಂತ ಕಡಿಮೆ ಇರಬೇಕು (ಕೆಲವು ವರ್ಗಗಳಿಗೆ 1.2 ಲಕ್ಷ ರೂ. ಮಿತಿ ಇರಬಹುದು).
• ಅರ್ಜಿದಾರರ ಹೆಸರಿನಲ್ಲಿ ದೇಶದ ಯಾವುದೇ ಭಾಗದಲ್ಲಿ ಸ್ವಂತ ಪಕ್ಕಾ ಮನೆ ಇರಬಾರದು.
• ಮನೆ ನಿರ್ಮಿಸಲು ಸ್ವಂತ ಜಮೀನು ಅಥವಾ ಕಚ್ಚಾ ಮನೆ ಹೊಂದಿರಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತರು ಅಧಿಕೃತ Ashraya Portal ಆಗಿರುವ https://ashraya.karnataka.gov.in/ ಮೂಲಕ ಅಥವಾ ಗ್ರಾಮ ಪಂಚಾಯಿತಿ/ಸ್ಥಳೀಯ ಶಾಸಕರ ಕಚೇರಿಯ ಮೂಲಕ ಅರ್ಜಿ ಸಲ್ಲಿಸಬಹುದು. ಸ್ಥಳೀಯ ಶಾಸಕರು ಅಥವಾ ಗ್ರಾಮ ಪಂಚಾಯಿತಿ ಸಮಿತಿಯು ಅರ್ಹರನ್ನು ಆಯ್ಕೆ ಮಾಡುತ್ತದೆ. ಅಧಿಕೃತ ವೆಬ್ ಸೈಟ್ನ ಲ್ಲಿ ‘Beneficiary Information’ ವಿಭಾಗಕ್ಕೆ ಹೋಗಿ, ನಿಮ್ಮ ಜಿಲ್ಲೆಯನ್ನು ಆರಿಸಿ ಮತ್ತು ಅಪ್ಲಿಕೇಶನ್ ಸಂಖ್ಯೆ ನಮೂದಿಸುವ ಮೂಲಕ ನಿಮ್ಮ ಅರ್ಜಿಯ ಸ್ಥಿತಿಯನ್ನು ತಿಳಿಯಬಹುದು.
ಇದನ್ನೂ ಓದಿ : ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!


















