ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಈ ವಾರ ರಕ್ಷಿತಾ ಶೆಟ್ಟಿ ಅವರ ಆಟವನ್ನು ಸುದೀಪ್ ಹೊಗಳಿದ್ದಾರೆ. ಅಶ್ವಿನಿ ಗೌಡ ಅವರು ಕಳಪೆ ಪಟ್ಟ ಪಡೆದ ವಾರವೇ ರಕ್ಷಿತಾ ಶೆಟ್ಟಿ ಅವರು ಕಿಚ್ಚನ ಚಪ್ಪಾಳೆ ಪಡೆದುಕೊಂಡಿದ್ದಾರೆ. ನಾಮಿನೇಟ್ ಆಗಿದ್ದ ರಕ್ಷಿತಾ ಸೇಫ್ ಕೂಡ ಆಗಿದ್ದಾರೆ. ಇದರಿಂದಾಗಿ ಅವರಿಗೆ ದೊಡ್ಡ ಬಲ ಬಂದಂತೆ ಆಗಿದೆ.

ಕಳೆದ 12 ಸೀಸನ್ಗಳಲ್ಲಿ ಕಿಚ್ಚ ಸುದೀಪ್ ಅವರೇ ಬಿಗ್ ಬಾಸ್ ಶೋ ನಿರೂಪಣೆ ಮಾಡಿದ್ದಾರೆ. ನೂರಾರು ಸ್ಪರ್ಧಿಗಳನ್ನು ಅವರು ನೋಡಿದ್ದಾರೆ. ಸ್ಪರ್ಧಿಗಳು ತಪ್ಪು ಮಾಡಿದಾಗ ಅವರು ಖಡಕ್ ಆಗಿ ಕ್ಲಾಸ್ ತೆಗೆದುಕೊಳ್ಳುತ್ತಾರೆ. ಇತ್ತೀಚೆಗೆ ಅವರು ರಕ್ಷಿತಾ ಶೆಟ್ಟಿಗೆ ಕ್ಲಾಸ್ ತೆಗೆದುಕೊಂಡರು. ಆಗ ‘ಪಿತ್ತ ನೆತ್ತಿಗೆ ಏರುತ್ತದೆ’ ಎಂದು ಕ್ಲಾಸ್ ತೆಗೆದುಕೊಂಡಿದ್ದರು. ಆದರೆ ಈ ವಾರ ರಕ್ಷಿತಾ ಅವರು ಸೈಲೆಂಟ್ ಆಗಿದ್ದು, ಚೆನ್ನಾಗಿ ಆಟವಾಡಿ, ಸೂಕ್ಷ್ಮ ವಿಚಾರಗಳಲ್ಲಿ ಮಾನವೀಯತೆ ಮೆರೆದಿದ್ದರು.ಇದನ್ನೆಲ್ಲಾ ಗಮನಿಸಿದ ಕಿಚ್ಚ ಸುದೀಪ್ ಈ ವಾರದ ಕಿಚ್ಚನ ಮೆಚ್ಚುಗೆಯ ಚಪ್ಪಾಳೆಯನ್ನ ರಕ್ಷಿತಾ ಶೆಟ್ಟಿ ನೀಡಿದ್ದಾರೆ.

ವಾರ ಪೂರ್ತಿ ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಜಗಳಗಳು ನಡೆದಿದ್ದವು. ಅಶ್ವಿನಿ ಗೌಡ ಅವರು ಸಿಕ್ಕಾಪಟ್ಟೆ ಗರಂ ಆಗಿದ್ದರು. ತಮಗೆ ಕೆಲವರು ಏಕವಚನದಲ್ಲಿ ಮಾತನಾಡಿಸುತ್ತಾರೆ ಎಂಬ ಕಾರಣಕ್ಕೆ ಅವರು ಉಪವಾಸ ಮಾಡಿದ್ದರು. ಆ ಎಲ್ಲ ವಿಚಾರಗಳನ್ನು ಇಟ್ಟುಕೊಂಡು ಕಿಚ್ಚ ಸುದೀಪ್ ಅವರು ವೀಕೆಂಡ್ ಸಂಚಿಕೆಯಲ್ಲಿ ಮಾತನಾಡಿದರು. ಈ ನಡುವೆ ರಕ್ಷಿತಾ ಶೆಟ್ಟಿಗೆ ಮೆಚ್ಚುಗೆ ಸೂಚಿಸಿದರು.
‘ಹೋದವಾರ ನಾನು ಕೆಲವರಿಗೆ ಬೈಯ್ದಿದ್ದೆ. ಅದಕ್ಕಿಂತಲೂ ಹೆಚ್ಚಾಗಿ ಅವರು ಹೋಗುತ್ತಿರುವ ಹಾದಿಯಲ್ಲಿ ಅವರೇ ಅವರಿಗೆ ಮುಳುವಾಗುತ್ತಿದ್ದಾರೆ ಎಂಬುದು ನಮಗೆ ಗೊತ್ತಾದಾಗ ನಾವು ಕ್ಲಾಸ್ ತೆಗೆದುಕೊಳ್ಳುವುದು ಯಾಕೆ ಎಂದರೆ, ತುಂಬ ಚೆನ್ನಾಗಿ ಆಡುತ್ತಿದ್ದೀರಿ.. ಹಾಳಾಗಬೇಡಿ ಅನ್ನೋದಕ್ಕೆ. ತಕ್ಷಣ ಆಟ ಬದಲಾಯಿಸಿಕೊಂಡು, ತಮ್ಮ ಹಿಂದಿನ ವ್ಯಕ್ತಿತ್ವಕ್ಕೆ ಹೋಗಿ, ತುಂಬಾ ಚೆನ್ನಾಗಿ ಆಟ ಆಡಿ, ತಿದ್ದಿಕೊಂಡು, ಮಾನವೀಯತೆ ತೋರಿಸಿ, ಬೈಯಿಸಿಕೊಂಡವರಿಂದಲೇ ಉತ್ತಮ ಅನಿಸಿಕೊಂಡ ರಕ್ಷಿತಾ ಅವರೇ ಈ ವಾರದ ಕಿಚ್ಚನ ಚಪ್ಪಾಳೆ ನಿಮಗೆ’ ಎಂದು ಸುದೀಪ್ ಹೇಳಿದರು.
‘ನಿಮಗೂ ಅಶ್ವಿನಿ ಅವರಿಗೂ ಎಷ್ಟೇ ಕಿತ್ತಾಟ ಆಗಿದ್ದರೂ ಕೂಡ ಅವರು ಉಪವಾಸ ಮಾಡಿದಾಗ ನೀವು ತೋರಿಸಿದ ಕಾಳಜಿ ಒಳ್ಳೆಯದು. ಅಶ್ವಿನಿ ಗೌಡ ಸಲುವಾಗಿ ನೀವು ಇಷ್ಟೆಲ್ಲ ಮಾಡಿದರೂ ಕೂಡ ಅದನ್ನು ಅಶ್ವಿನಿ ಎದುರು ಹೋಗಿ ನೀವು ಹೇಳಿಕೊಳ್ಳಲಿಲ್ಲ’ ಎಂದು ರಕ್ಷಿತಾ ಶೆಟ್ಟಿ ಅವರನ್ನು ಸುದೀಪ್ ಹೊಗಳಿದರು. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಈವರೆಗೂ ಗಿಲ್ಲಿ ನಟ, ರಕ್ಷಿತಾ ಶೆಟ್ಟಿ, ರಘು, ಧನುಷ್ ಅವರಿಗೆ ಕಿಚ್ಚನ ಚಪ್ಪಾಳೆ ಸಿಕ್ಕಿದೆ.
ಇದನ್ನೂ ಓದಿ : ಉತ್ತರಾಖಂಡ | ಶಾಲೆಯ ಸಮೀಪವೇ 20 ಕೆಜಿಗೂ ಹೆಚ್ಚಿನ ಪ್ರಮಾಣದ ಸ್ಫೋಟಕ ಪತ್ತೆ..!



















