ಬೆಂಗಳೂರು ; ಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಕಾಂಗ್ರೆಸ್ನಲ್ಲಿ ಅಸಮಾಧಾನ ಭುಗಿಲೆದ್ದಿದೆ.
ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಅನೇಕ ಕಾಂಗ್ರೆಸ್ ಶಾಸಕರ ಅಸಮಾಧಾನ ಸ್ಪೋಟಗೊಂಡಿದ್ದು, ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಹೈಕಮಾಂಡ್ ಮತ್ತು ರಾಜ್ಯ ನಾಯಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ತಮ್ಮ ಶಾಸಕ ಸ್ಥಾನಕ್ಕೆ ನಾಳೆ ಬೆಳಗ್ಗೆ ಅಧಿಕೃತವಾಗಿ ರಾಜೀನಾಮೆ ನೀಡುವುದಾಗಿ ಬೇಳೂರು ಗೋಪಾಲಕೃಷ್ಣ ಅವರು ಹೇಳಿದ್ದಾರೆ.
ಸಚಿವ ಸಂಪುಟ ವಿಸ್ತರಣೆಯನ್ನು “ಮೋಸ” ಎಂದು ಕರೆದಿರುವ ಬೇಳೂರು ಗೋಪಾಲಕೃಷ್ಣ, ತಮಗೆ ಬೇಕಾದವರನ್ನು ಮಾತ್ರ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ. ನನಗೆ ಅನ್ಯಾಯವಾಗಿದೆ. ಸಂಪುಟ ವಿಸ್ತರಣೆ ಹೆಸರಲ್ಲಿ ಮತ್ತದೇ ನಾಯಕರಿಗೆ ಜವಾಬ್ದಾರಿ ನೀಡಲಾಗಿದೆ. ನಮ್ಮನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸಲಾಗಿದೆ. ಇದನ್ನು ಸಹಿಸಿಕೊಂಡಿರಲು ನನ್ನಿಂದ ಸಾಧ್ಯವಿಲ್ಲ. ನಾಳೆಯೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಬೇಳೂರು ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ : ಕೊನೆ ಕ್ಷಣದ ಹೈಡ್ರಾಮಾ ; ಮಂಕಾಳ ವೈದ್ಯ ಔಟ್, ಎಸ್.ಎಸ್ ಮಲ್ಲಿಕಾರ್ಜುನ್ಗೆ ಮಂತ್ರಿ ಪಟ್ಟ!


















