ಶಿವಮೊಗ್ಗ: ಮಾಳೂರು ಸಮೀಪದಲ್ಲಿ ಕಾಡಾನೆ ಕಾಣಿಸಿಕೊಂಡಿದ್ದರಿಂದ ಸ್ಥಳಿಯರಲ್ಲಿ ಎಚ್ಚರಿಕೆ ವಹಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂಟಿ ಸಲಗವೊಂದು ಕಾಡಿನಿಂದ ನಾಡಿಗೆ ಸಂಚರಿಸಿದೆ. ಜೊತೆಗೆ ರಾತ್ರಿ ಸೀಕೆ, ಕಾವೇರಿ, ಬೈಲುಬಡಿಗೆ, ಕುಡುವಳ್ಳಿ, ಮಳಗಾರು ಹಾಗೂ ತೀರ್ಥಹಳ್ಳಿ- ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿಯೂ ಓಡಾಡಿದೆ. ಆದ್ದರಿಂದ ವಾಹನ ಸವಾರರು ಜಾಗರೂಕರಾಗಬೇಕಿದೆ. ಗ್ರಾಮೀಣ ಭಾಗದ ಜನರಿಗೆ ವಿನಾಕಾರಣ ಮನೆಯಿಂದ ಹೊರಗೆ ಹೋಗದಂತ ಕಟ್ಟೆಚ್ಚರ ವಹಿಸಬೇಕೆಂದು ಮನವಿ ಮಾಡಲಾಗಿದೆ.